ರಾಜ್ಯ

ಪೌರತ್ವ ತಿದ್ದುಪಡಿ ಕಾಯ್ದೆ: ಮಸೀದಿಗೆ ಹೋಗಿ ಜನರಲ್ಲಿ ಅರಿವು ಮೂಡಿಸಿದ ಪೊಲೀಸ್ ಅಧಿಕಾರಿ!

ಗಲಭೆ, ಹಿಂಸಾಚಾರವಾಗುತ್ತಿದ್ದರೆ ಜನರಲ್ಲಿ ಅರಿವು ಮೂಡಿಸುವುದು ಅತ್ಯಂತ ಉತ್ತಮ ಪರಿಹಾರ, ಈ ಪೊಲೀಸ್ ಅಧಿಕಾರಿ ಮಾಡಿದ್ದು ಕೂಡ ಅದನ್ನೇ. ರಾಜ್ಯದ ಅಲ್ಲಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಪ್ರತಿಭಟನೆ ನಡೆಯುತ್ತಿರುವಾಗ ಎರಡು ಮಸೀದಿಗಳಿಗೆ ಹೋಗಿ ಮುಸಲ್ಮಾನರಲ್ಲಿ ಜಾಗೃತಿ ಮೂಡಿಸುವ ಪ್ರಯತ್ನ ಮಾಡಿದರು.

ಬೆಂಗಳೂರು: ಗಲಭೆ, ಹಿಂಸಾಚಾರವಾಗುತ್ತಿದ್ದರೆ ಜನರಲ್ಲಿ ಅರಿವು ಮೂಡಿಸುವುದು ಅತ್ಯಂತ ಉತ್ತಮ ಪರಿಹಾರ, ಈ ಪೊಲೀಸ್ ಅಧಿಕಾರಿ ಮಾಡಿದ್ದು ಕೂಡ ಅದನ್ನೇ. ರಾಜ್ಯದ ಅಲ್ಲಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಪ್ರತಿಭಟನೆ ನಡೆಯುತ್ತಿರುವಾಗ ಎರಡು ಮಸೀದಿಗಳಿಗೆ ಹೋಗಿ ಮುಸಲ್ಮಾನರಲ್ಲಿ ಜಾಗೃತಿ ಮೂಡಿಸುವ ಪ್ರಯತ್ನ ಮಾಡಿದರು.


ಬೆಂಗಳೂರಿನ ಹೆಚ್ ಎಸ್ ಆರ್ ಲೇ ಔಟ್ ಪೊಲೀಸ್ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಆಗಿರುವ ರಾಘವೇಂದ್ರ ಅಗರಾ ಮತ್ತು ಅಕ್ಸ ಮಸೀದಿಗಳಿಗೆ ಹೋದಾಗ ಖಾಕಿ ಧಿರಿಸಿನಲ್ಲಿ ಬಂದ ವ್ಯಕ್ತಿ ಬಗ್ಗೆ ಅಲ್ಲಿ ನೆರೆದಿದ್ದವರಿಗೆ ಕುತೂಹಲ ಉಂಟಾಯಿತು. ನಮಾಜ್ ಗೆಂದು ಸುಮಾರು 3ರಿಂದ 4 ಸಾವಿರ ಜನರು ಸೇರಿದ್ದರು.


ಅಲ್ಲಿಗೆ ಹೋದ ಇನ್ಸ್ ಪೆಕ್ಟರ್ ರಾಘವೇಂದ್ರ, ಹರಡುತ್ತಿರುವ ವದಂತಿಗಳಿಗೆ ಕಿವಿಗೊಡಬೇಡಿ, ಏನೇ ಮಾಡುವುದಿದ್ದರೂ ಮೊದಲು ನಿಜವಾದ ಸಂಗತಿಯೇನೆಂದು ತಿಳಿದುಕೊಂಡು ಮುಂದುವರಿಯಿರಿ, ಏನಾದರೂ ಸಂದೇಹಗಳು ಬಂದರೆ ಬಂದು ನಮ್ಮ ಬಳಿ ಮೊದಲು ವಿಷಯ ತಿಳಿದುಕೊಳ್ಳಿ, ತಪ್ಪು ದಾರಿಗಿಳಿಯಬೇಡಿ ಎಂದರು.


ರಾಘವೇಂದ್ರ ಮೂಲತಃ ಚಿಕ್ಕಮಗಳೂರಿನವರು, 2003ರಲ್ಲಿ ಪೊಲೀಸ್ ಸೇವೆಗೆ ಸೇರಿ ಅನೇಕ ಕಡೆಗಳಲ್ಲಿ ಇದುವರೆಗೆ ಕೆಲಸ ಮಾಡಿದ್ದಾರೆ. ಕಳೆದ ಜನವರಿಯಲ್ಲಿ ಹೆಚ್ ಎಸ್ ಆರ್ ಲೇ ಔಟ್ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದೆ.


ಈ ಬಗ್ಗೆ ಮಾತನಾಡಿದ ಇನ್ಸ್ ಪೆಕ್ಟರ್ ರಾಘವೇಂದ್ರ, ಹಲವರಿಗೆ ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ಗೊತ್ತಿಲ್ಲ. ಸುಮ್ಮನೆ ಗಲಾಟೆಯಾಗುತ್ತಿದೆ. ಇದಕ್ಕಾಗಿ ಶುಕ್ರವಾರ ವೇಳೆ ಮಸೀದಿ ಬಳಿ ಹೋಗಿ ಜನರಲ್ಲಿ ಅರಿವು ಮೂಡಿಸಲು ಪ್ರಯತ್ನಿಸಿದೆ ಎಂದರು.


ರಾಘವೇಂದ್ರ ಅವರು ತಮ್ಮ ವಿರಾಮದ ಸಮಯದಲ್ಲಿ ಹೀಗೆ ಬೇರೆ ಬೇರೆ ವಿಷಯಗಳ ಕುರಿತು ಮಹಿಳೆಯರು, ಮಕ್ಕಳು, ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕೆಲಸ ಮಾಡುತ್ತಾರೆ. ಇತ್ತೀಚೆಗೆ ಮಹಿಳೆಯರಿಗೆ ಸುರಕ್ಷಾ ಆಪ್ ಬಗ್ಗೆ ಅರಿವು ಮೂಡಿಸಿದ್ದರು.

ಕಾನೂನು ಪದವಿ ಪಡೆದಿರುವ ಇನ್ಸ್ ಪೆಕ್ಟರ್ ರಾಘವೇಂದ್ರ, ಸ್ವತಃ ಕವಿ. ಪತ್ರಕರ್ತನಾಗಬೇಕೆಂಬ ಕನಸು ಕಂಡಿದ್ದರು. ಆದರೆ ಆದದ್ದು ಪೊಲೀಸ್ ಅಧಿಕಾರಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT