ಡಾ.ಹರ್ಷ 
ರಾಜ್ಯ

'ಮಂಗಳೂರು ಗಲಭೆಗೆ ಪೊಲೀಸ್ ಆಯುಕ್ತ ಡಾ. ಪಿ.ಎಸ್. ಹರ್ಷ ಅವರೇ ನೇರ ಕಾರಣ'

ಪೊಲೀಸ್ ಆಯುಕ್ತ ಡಾ.ಪಿ.ಎಸ್. ಹರ್ಷ ಅವರ ಬೇಜವಾಬ್ದಾರಿ ನಡೆಯೇ ಪರಿಸ್ಥಿತಿ ವಿಕೋಪಕ್ಕೆ ಹೋಗಿ ಇಬ್ಬರ ಬಲಿಗೆ ಕಾರಣವಾಯಿತು ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ರಾಜ್ಯಾಧ್ಯಕ್ಷ ತಾಹೀರ್ ಹುಸೇನ್ ಆರೋಪಿಸಿದ್ದಾರೆ.

ಮಂಗಳೂರು: ಪೊಲೀಸ್ ಆಯುಕ್ತ ಡಾ.ಪಿ.ಎಸ್. ಹರ್ಷ ಅವರ ಬೇಜವಾಬ್ದಾರಿ ನಡೆಯೇ ಪರಿಸ್ಥಿತಿ ವಿಕೋಪಕ್ಕೆ ಹೋಗಿ ಇಬ್ಬರ ಬಲಿಗೆ ಕಾರಣವಾಯಿತು ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ರಾಜ್ಯಾಧ್ಯಕ್ಷ ತಾಹೀರ್ ಹುಸೇನ್ ಆರೋಪಿಸಿದ್ದಾರೆ.

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಮಂಗಳೂರಿನಲ್ಲಿ ಹಲವು ಸಂಘಟನೆಗಳು ಶಾಂತ ಪ್ರತಿಭಟನೆಗೆ ಅವಕಾಶ ಕೋರಿದ್ದವು. ಶಾಂತಿ ಬಯಸದ ಮಂಗಳೂರು ಕಮಿಷನರ್ ಡಾ.ಪಿ.ಎಸ್. ಹರ್ಷ ಅವರು ಏಕಾಏಕಿ ಸೆಕ್ಷನ್ 144 ಹಾಕಿ ಸಾರ್ವಜನಿಕ ಕಾನೂನು ಬದ್ಧ ಪ್ರತಿಭಟನೆಗೆ ತಡೆ ನೀಡಿದರು ಮತ್ತು ಇಂತಹ ವರ್ತನೆ ಕಾನೂನು ಸುವ್ಯವಸ್ಥೆ ಕೆಡಿಸುವ ಕಡೆ ಮಂಗಳೂರನ್ನು ಕೊಂಡೊಯ್ಯಿತು ಎಂದು ಆರೋಪಿಸಿದ್ದಾರೆ.

ಡಿ. 19 ರ ಮಧ್ಯಾಹ್ನ ನಡೆದ ಪ್ರತಿಭಟನೆ ವೇಳೆ ಸೇರಿದ್ದ ಕೆಲವೇ ಕೆಲವು ಯುವಕರ ಮನಸೆಳೆಯುವಲ್ಲಿ ಕಮಿಷನರ್ ಅವರು ವಿಫಲವಾದರು ಮತ್ತು ಮನಬಂದಂತೆ ಲಾಠಿ ಚಾರ್ಜ್ ಮಾಡಿ ಯುವಕರ ಗುಂಪು ಆಕ್ರೋಶಗೊಳ್ಳುವಂತೆ ಮಾಡಿದರು. ಕಾನೂನಿನ ಯಾವುದೇ ಪರಿಧಿಯನ್ನು ಪಾಲಿಸದೆ ನೇರವಾಗಿ ಗುಂಡನ್ನು ಹಾರಿಸಿ ಇಬ್ಬರು ಅಮಾಯಕರ ಜೀವಹಾನಿಗೆ ಕಾರಣವಾದರು. ಈ ಎಲ್ಲಾ ಗಲಭೆಗೆ ಕಮಿಷನರ್ ಹರ್ಷ ಅವರು ನೇರ ಕುಮ್ಮಕ್ಕು ನೀಡಿದರು. ಸೆಕ್ಷನ್ ಹಾಕುವ ಮುಂಚಿನಿಂದ ಅವರು ಹೇಳಿದ ಕಟ್ಟುಕಥೆಗಳೆ ಎಲ್ಲಾ ಗಲಭೆಗೆ ಮೂಲ ಕಾರಣ ಎಂದು ದೂರಿದ್ದಾರೆ.

ಇದಲ್ಲದೆ ವರದಿ ಮಾಡುತ್ತಿದ್ದ ಕೇರಳ ಮೂಲದ ಪತ್ರಕರ್ತರ ಜೊತೆ ಗೂಂಡಾ ವರ್ತನೆ ತೋರಿಸಿ ಅವರನ್ನು ಬಂಧಿಸಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಂದ ಕರ್ನಾಟಕ ಸರಕಾರಕ್ಕೆ ಚೀಮಾರಿ ಹಾಕಿಸುವಂತೆ ಕೂಡಾ ಮಾಡಿರುತ್ತಾರೆ. ಈ ಎಲ್ಲಾ ಘಟನೆಗಳ ಬಗ್ಗೆ ಉನ್ನತ ತನಿಖೆಯಾಗಬೇಕೆಂದು ವೆಲ್ಪೇರ್ ಪಾರ್ಟಿ ಆಗ್ರಹಿಸುತ್ತದೆ. ಕಮಿಷನರ್ ಹರ್ಷ ಅವರನ್ನು ತಕ್ಷಣ ಕೆಲಸದಿಂದ ವಜಾಗೊಳಿಸಿ ತನಿಖೆ ನಡೆಸಬೇಕು.

ಇಲ್ಲವಾದಲ್ಲಿ ಈ ಬಗ್ಗೆ ಪಾರ್ಟಿ ರಾಜ್ಯಾದ್ಯಂತ ತೀವ್ರ ತರದ ಪ್ರತಿಭಟನೆಗಳನ್ನು ಮಾಡಲಾಗುವುದು. ವೆಲ್ಪೇರ್ ಪಾರ್ಟಿ ಪೌರತ್ವ ವಿರೋಧಿ ಕಾಯ್ದೆ ವಿರೋಧದ ಪ್ರತಿಭಟನೆ ಮುಂದುವರೆಸುತ್ತದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

SCROLL FOR NEXT