ರಾಜ್ಯ

ಪ್ರಚೋದನಾಕಾರಿ ಹೇಳಿಕೆ: ಶಾಸಕ ಯು.ಟಿ.ಖಾದರ್ ವಿರುದ್ಧ ಎಫ್ಐಆರ್ ದಾಖಲು

Manjula VN

ಮಂಗಳೂರು: ಪೌರತ್ವ ಕಾಯ್ದೆ ತಿದ್ದುಪಡಿ ವಿರುದ್ಧದ ಪ್ರತಿಭಟನೆ ಕುರಿತು ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಮಾಜಿ ಸಚಿವ ಹಾಗೂ ಶಾಸಕ ಯು.ಟಿ.ಖಾದರ್ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಕಳೆದ ಬುಧವಾರ ಹೇಳಿಕೆ ನೀಡಿದ್ದ ಖಾದರ್ ಅವರು, ಇಡೀ ದೇಶವೇ ಹೊತ್ತಿ ಉರಿಯುತ್ತಿದೆ ಎಂದು ಹೇಳಿದ್ದರು. ಈ ಹೇಳಿಕೆ ಭಾರೀ ವಿರೋಧ ವ್ಯಕ್ತವಾಗಿತ್ತು. 

ಈ ಸಂಬಂಧ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸಂದೇಶ್ ಕುಮಾರ್ ಶೆಟ್ಟಿ ದೂರಿನ ಮೇಲೆ ಮಂಗಳೂರು ಪೊಲೀಸರು ಖಾದರ್ ಅವರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆಂದು ತಿಳಿದುಬಂದಿದೆ. 

ಪೌರತ್ವ ಕಾಯ್ದೆ ತಿದ್ದುಪಡಿ ಕುರಿತು ಈಗಾಗಲೇ ದೇಶವೇ ಹೊತ್ತಿ ಉರಿಯುತ್ತಿದೆ. ಕರ್ನಾಟಕ ಶಾಂತಿ ನಾಡಾಗಿದ್ದು,  ಒಂದು ವೇಳೆ ಇಲ್ಲಿಯೂ ಕಾಯ್ದೆಯನ್ನು ಜಾರಿಗೆ ಮುಂದಾದರೆ ಕರ್ನಾಟದಲ್ಲೂ ಬೆಂಕಿ ಹೊತ್ತಿ ಉರಿಯಲಿದೆ ಎಂದು ಖಾದರ್ ಯಡಿಯೂರಪ್ಪ ಅವರಿಗೆ ಎಚ್ಚರಿಸಿದ್ದರು. 

SCROLL FOR NEXT