ಬೆಂಗಳೂರು: ಮಂಗಳೂರು ಗೋಲಿಬಾರ್ ಘಟನೆಯಲ್ಲಿ ಮೃತಪಟ್ಟ ಇಬ್ಬರ ಕುಟುಂಬಕ್ಕೆ ತಲಾ 10 ಲಕ್ಷ ರೂಪಾಯಿ ಪರಿಹಾರವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರು ಶಾಂತವಾಗಿದ್ದು, ಅಲ್ಲಿಗೆ ಭೇಟಿ ನೀಡಲು ನಾವು ಯಾರಿಗೂ ತಡೆ ಒಡ್ಡಿಲ್ಲ. ಈಗ ಅಲ್ಲಿ ಕರ್ಫ್ಯೂ ಸಡಿಸಲಿಸಲಾಗಿದೆ. ಮಂಗಳೂರು ಘಟನೆಯ ಬಗ್ಗೆ ತನಿಖೆಯನ್ನೂ ನಡೆಸುತ್ತೇವೆ. ಸಿದ್ದರಾಮಯ್ಯ ಯಾವಾಗ ಬೇಕಾದರೂ ಮಂಗಳೂರಿಗೆ ಭೇಟಿ ನೀಡಬಹುದು ಎಂದು ಯಡಿಯೂರಪ್ಪ ತಿಳಿಸಿದರು.
ಕಂದಕ್ ನಿವಾಸಿ ಅಬ್ದುಲ್ ಜಲೀಲ್ ಹಾಗೂ ನೌಶೀನ್ ಅವರು ಗುರುವಾರ ನಡೆದ ಪೊಲೀಸ್ ಗೋಲಿಬಾರ್ನಲ್ಲಿ ಮೃತಪಟ್ಟಿದ್ದರು. ನಿನ್ನೆ ಯಡಿಯೂರಪ್ಪ ಅವರು ಸಂತ್ರಸ್ತ ಕುಟುಂಬವನ್ನು ಭೇಟಿಯಾಗಿ ಸಾಂತ್ವನ ಹೇಳಿದ್ದರು.