ಡಾ.ಎಸ್.ಬಿ.ಬೊಮ್ಮನಹಳ್ಳಿ 
ರಾಜ್ಯ

ಬೆಳಗಾವಿ: ಮನೆ ಹಾನಿ ಕುರಿತು ತಪ್ಪು ಮಾಹಿತಿ ನೀಡಿದ ನಾಲ್ವರು ಅಧಿಕಾರಿಗಳ ಅಮಾನತು

ಇತ್ತೀಚೆಗೆ ಸುರಿದ ಭಾರೀ ಮಳೆ ಮತ್ತು ಪ್ರವಾಹದ ಸಂದರ್ಭದಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ವಾಣಿಜ್ಯ ಕಟ್ಟಡಕ್ಕೆ ಮನೆಹಾನಿ ಎಂದು ತಪ್ಪು ವರದಿ ನೀಡಿದ ಆರೋಪದ ಮೇಲೆ ಕಂದಾಯ, ಲೋಕೋಪಯೋಗಿ ಮತ್ತು ಮಹಾನಗರ ಪಾಲಿಕೆಯ

ಬೆಳಗಾವಿ: ಇತ್ತೀಚೆಗೆ ಸುರಿದ ಭಾರೀ ಮಳೆ ಮತ್ತು ಪ್ರವಾಹದ ಸಂದರ್ಭದಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ವಾಣಿಜ್ಯ ಕಟ್ಟಡಕ್ಕೆ ಮನೆಹಾನಿ ಎಂದು ತಪ್ಪು ವರದಿ ನೀಡಿದ ಆರೋಪದ ಮೇಲೆ ಕಂದಾಯ, ಲೋಕೋಪಯೋಗಿ ಮತ್ತು ಮಹಾನಗರ ಪಾಲಿಕೆಯ ನಾಲ್ವರು ಅಧಿಕಾರಿಗಳನ್ನು ಅಮಾನತು ಮಾಡಿ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಆದೇಶ ಹೊರಡಿಸಿದ್ದಾರೆ.

ಅನಗೋಳದ ಗ್ರಾಮ ಲೆಕ್ಕಿಗ ಎಸ್.ಜಿ.ಜೋಗಳೇಕರ, ಕಂದಾಯ ನಿರೀಕ್ಷಕ ಜೆ.ಕೆ.ಪಕಾಲೆ, ಮಹಾನಗರ ಪಾಲಿಕೆಯ ದ್ವಿತೀಯ ದರ್ಜೆ ಸಹಾಯಕ ಹಾಗೂ ಪ್ರಭಾರಿ ಕಂದಾಯ ನಿರೀಕ್ಷಕ ಸಿ.ಐ.ಬಿ.ಪಾಟೀಲ ಹಾಗೂ ಲೋಕೋಪಯೋಗಿ ಇಲಾಖೆಯ ಸಹಾಯಕ ಅಭಿಯಂತರ ಎಸ್.ಸಿ.ಮಠಪತಿ ಅವರನ್ನು ಜಿಲ್ಲಾಧಿಕಾರಿ ಅವರು ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತು ಮಾಡಿದ್ದಾರೆ.

ಪ್ರವಾಹ ಸಂದರ್ಭದಲ್ಲಿ ಹಾನಿಗೊಳಗಾದ ಅನಗೋಳದ ಅರುಣ ಎನ್. ಗಾವಡೆ ಎಂಬುವರ ಗ್ಯಾರೇಜ್ ಕಟ್ಟಡವನ್ನು ವಾಸದ ಮನೆ ಎಂದು ತಪ್ಪು ವರದಿ ನೀಡಿದ್ದರು.

ಸರ್ಕಾರದಿಂದ ಅವರ ಖಾತೆಗೆ ಒಂದು ಲಕ್ಷ ರೂಪಾಯಿ ಮೊದಲ ಕಂತಿನ ಪರಿಹಾರದ ಹಣವನ್ನು ಸಹ ಜಮೆ ಮಾಡಲಾಗಿತ್ತು.

ತಪ್ಪು ವರದಿ ಆಧಾರದ ಮೇಲೆ ಅನರ್ಹರಿಗೆ ಪರಿಹಾರದ ಮೊತ್ತ ಜಮೆಯಾಗಿರುವುದರಿಂದ ಕೆಂಡಮಂಡಲವಾಗಿರುವ ಜಿಲ್ಲಾಧಿಕಾರಿ ಅವರು, ಪ್ರಾಥಮಿಕ ತನಿಖಾ ವರದಿ ಆಧಾರದ ಮೇಲೆ ಅಮಾನತು ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT