ಸಿದ್ದರಾಮಯ್ಯ 
ರಾಜ್ಯ

ಸಿಐಡಿ ತನಿಖೆಗೆ ಸಹಮತವಿಲ್ಲ, ನ್ಯಾಯಾಂಗ ತನಿಖೆಯಾಗಬೇಕು: ಸಿದ್ದರಾಮಯ್ಯ

ಮಂಗಳೂರು ಗೋಲಿಬಾರ್ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿರುವುದಕ್ಕೆ ನನಗೆ ಒಪ್ಪಿಗೆಯಿಲ್ಲ, ಮಂಗಳೂರು ಘಟನೆ ಕುರಿತು ನ್ಯಾಯಾಂಗ ತನಿಖೆಯೇ ಆಗಬೇಕು ಎಂದು ಮಾಜಿ ಸಿಎಂ ಸಿದ್ದರಾಮ್ಯ ಆಗ್ರಹಿಸಿದ್ದಾರೆ. 

ಮಂಗಳೂರು:  ಮಂಗಳೂರು ಗೋಲಿಬಾರ್ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿರುವುದಕ್ಕೆ ನನಗೆ ಒಪ್ಪಿಗೆಯಿಲ್ಲ, ಮಂಗಳೂರು ಘಟನೆ ಕುರಿತು ನ್ಯಾಯಾಂಗ ತನಿಖೆಯೇ ಆಗಬೇಕು ಎಂದು ಮಾಜಿ ಸಿಎಂ ಸಿದ್ದರಾಮ್ಯ ಆಗ್ರಹಿಸಿದ್ದಾರೆ. 

ಕರ್ಫ್ಯೂ ತೆರವಾದ ಬಳಿಕ ಇಂದು ಮಂಗಳೂರಿಗೆ ಭೇಟಿ ನೀಡಿದ ಅವರು, ಗೋಲಿಬಾರ್​ನಲ್ಲಿ ಸಾವನ್ನಪ್ಪಿದವರ ಕುಟುಂಬಸ್ಥರನ್ನು ಭೇಟಿಯಾಗಿ ಮಾತನಾಡುತ್ತೇನೆ ಎಂದರು.

ಇದೇ ವೇಳೆ ಘಟನೆಯನ್ನು ಸಿಐಡಿಗೆ ಒಪ್ಪಿಸುವ ನಿರ್ಧಾರ ಸರಿಯಲ್ಲ. ಕಾರಣ ಸಿಐಡಿ ಇರುವುದು ರಾಜ್ಯ ಪೊಲೀಸರ ಕೈಯಲ್ಲಿ. ಗೋಲಿಬಾರ್​ ನಡೆದಿದ್ದು ಕೂಡ ಪೊಲೀಸರಿಂದ. ಹೀಗಾಗಿ ಈ ತನಿಖೆಗೆ ನಮ್ಮ ವಿರೋಧವಿದೆ  ಎಂದರು.

ಘಟನೆಯನ್ನು ಹೈ ಕೋರ್ಟ್​ ಹಾಲಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆ ನಡೆಸಬೇಕು. ನ್ಯಾಯಾಂಗ ತನಿಖೆಯಿಂದ ಮಾತ್ರ ನ್ಯಾಯ ದೊರಕಲು ಸಾಧ್ಯ. ಸಿಎಂ ಸದಾ ಸುಳ್ಳು ಹೇಳುವವರು. ಅವರು ಘಟನೆಯ ಪ್ರತ್ಯಕ್ಷ ದರ್ಶಿಯಲ್ಲ. ಹಾಗಾಗಿ ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT