ಸಾಂದರ್ಭಿಕ ಚಿತ್ರ 
ರಾಜ್ಯ

ಚಾಮರಾಜನಗರ: ಮಗನೊಂದಿಗೆ ಜಗಳ,ಮನನೊಂದ ತಂದೆ ಆತ್ಮಹತ್ಯೆ

ಕೌಟುಂಬಿಕ ಕಲಹದಿಂದ ಬೇಸತ್ತ ವ್ಯಕ್ತಿಯೋರ್ವ ವಿಷ ಸೇವಿಸಿ ಮೃತಪಟ್ಟಿರುವ ಘಟನೆ ತೆರಕಣಾಂಬಿ ಸಮೀಪದ ಹುಲುಗನಮುರುಡಿ ಬೆಟ್ಟದ ಸಮೀಪ ನಡೆದಿದೆ.

ಚಾಮರಾಜನಗರ: ಕೌಟುಂಬಿಕ ಕಲಹದಿಂದ ಬೇಸತ್ತ ವ್ಯಕ್ತಿಯೋರ್ವ ವಿಷ ಸೇವಿಸಿ ಮೃತಪಟ್ಟಿರುವ ಘಟನೆ ತೆರಕಣಾಂಬಿ ಸಮೀಪದ ಹುಲುಗನಮುರುಡಿ ಬೆಟ್ಟದ ಸಮೀಪ ನಡೆದಿದೆ.

ಇಲ್ಲಿನ ಕುಮಚಹಳ್ಳಿ ನಿವಾಸಿ ಶಿವಲಿಂಗಪ್ಪ (60) ಮೃತಪಟ್ಟ ದುರ್ದೈವಿ. ಸಾಲದಿಂದ ಕೊಂಡುಕೊಂಡಿದ್ದ ಜೆಸಿಬಿ ವಿಚಾರಕ್ಕೆ ಮಗನೊಂದಿಗೆ ಜಗಳವಾಡಿ ಮನನೊಂದು ಡಿಸೆಂಬರ್​ 14ರಂದು ನಾಪತ್ತೆಯಾಗಿದ್ದರು ಎನ್ನಲಾಗಿದೆ.

ಗ್ರಾಮದಲ್ಲಿರುವ ಮಠಕ್ಕೆ ತೆರಳುತ್ತೇನೆಂದು ಮನೆಯವರಿಗೆ ಹೇಳಿ ಬಂದಿದ್ದ ಶಿವಲಿಂಗಪ್ಪ ಬೆಟ್ಟದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ.

ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ತೆರಕಣಾಂಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

SCROLL FOR NEXT