ಪೇಜಾವರ ವಿಶ್ವೇಶ ತೀರ್ಥ ಶ್ರೀ 
ರಾಜ್ಯ

ಪೇಜಾವರ ಶ್ರೀ  ಆರೋಗ್ಯ ಇನ್ನೂ ಗಂಭೀರವಾಗಿಯೇ ಇದೆ;  ಮಣಿಪಾಲ್ ಆಸ್ಪತ್ರೆ

ಮಣಿಪಾಲ್ ಕಸ್ತೂರಿ ಬಾ ಮಡಿಕಲ್  ಕಾಲೇಜು ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ  ಚಿಕಿತ್ಸೆ ಕಲ್ಪಿಸಲಾಗುತ್ತಿರುವ  ಪೇಜಾವರ ವಿಶ್ವೇಶ ತೀರ್ಥ ಶ್ರೀ ಗಳ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಗಂಭೀರವಾಗಿಯೇ ಮುಂದುವರಿದಿದೆ.

ಉಡುಪಿ: ಮಣಿಪಾಲ್ ಕಸ್ತೂರಿ ಬಾ ಮಡಿಕಲ್  ಕಾಲೇಜು ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ  ಚಿಕಿತ್ಸೆ ಕಲ್ಪಿಸಲಾಗುತ್ತಿರುವ  ಪೇಜಾವರ ವಿಶ್ವೇಶ ತೀರ್ಥ ಶ್ರೀ ಗಳ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಗಂಭೀರವಾಗಿಯೇ ಮುಂದುವರಿದಿದೆ.

ಶ್ರೀಗಳಿಗೆ  ಕೃತಕ ಉಸಿರಾಟ ವ್ಯವಸ್ಥೆ ಅಳವಡಿಸಲಾಗಿದ್ದು, ಆರೋಗ್ಯ ಸ್ಥಿತಿ  ಗಂಭೀರವಾಗಿಯೇ ಮುಂದುವರಿದಿದೆ ಎಂದು  ಆಸ್ಪತ್ರೆ  ಸೋಮವಾರ ಬಿಡುಗಡೆಗೊಳಿಸಿರುವ ಹೇಳಿಕೆಯಲ್ಲಿ ತಿಳಿಸಿದೆ.

ಉಸಿರಾಟದ ಸಮಸ್ಯೆ ಹಾಗೂ ಹೃದಯ ಸಂಬಂಧಿ ತೊಂದರೆಗಳು ಕಾಣಿಸಿಕೊಂಡ ನಂತರ  ಪೇಜಾವರ ಶ್ರೀಗಳನ್ನು ಶುಕ್ರವಾರ ಮುಂಜಾನೆ  ಕೆಎಂಸಿ ಆಸ್ಪತ್ರೆಗೆ  ದಾಖಲಿಸಲಾಗಿತ್ತು. 

ಭಾನುವಾರ  ಆಸ್ಪತ್ರೆಗೆ ಭೇಟಿ ನೀಡಿದ್ದ  ಸುಪ್ರಸಿದ್ದ  ವಿದ್ವಾಂಸ ಬನ್ನಂಜೆ ಗೋವಿಂದಾಚಾರ್ಯ,  ಶ್ರೀ ಮಠದ ಕಿರಿಯ ಶ್ರೀ ವಿಶ್ವ ಪ್ರಸನ್ನ ತೀರ್ಥರು,  ಶ್ರೀಗಳ ಆರೋಗ್ಯ ಸುಧಾರಣೆ ಕುರಿತು  ವೈದ್ಯರಿಂದ  ಮಾಹಿತಿ ಪಡೆದುಕೊಂಡಿದ್ದರು.

ಪೇಜಾವರ ಶ್ರೀಗಳ  ಆಪ್ತ ಕಾರ್ಯದರ್ಶಿ  ವಿಷ್ಣುಮೂರ್ತಿ ಆಚಾರ್ಯ,   ಶ್ರೀಗಳು ಚಿಕಿತ್ಸೆಗೆ  ಸ್ಪಂದಿಸುತ್ತಿದ್ದು, ಅವರ ಆರೋಗ್ಯ ಕುರಿತು ವದಂತಿಗಳನ್ನು ಹಬ್ಬಿಸದಂತೆ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. ಸೋಂಕು ತಗುಲುವ ಭೀತಿಯಿಂದ, ಪೇಜಾವರ ಶ್ರೀಗಳ ಬಳಿ  ತೆರಳಲು ಭಕ್ತಾಧಿಗಳನ್ನು ನಿರಾಕರಿಸಲಾಗುತ್ತಿದೆ  ಎಂದು ಸ್ಪಷ್ಟಪಡಿಸಿದರು.

ಶ್ರೀಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಕೋರಿ  ಭಕ್ತಾಧಿಗಳು  ಸೋಮವಾರ ಕಾರ್ಕಳದ  ಶ್ರೀ ರಾಘವೇಂದ್ರ ಮಠದಲ್ಲಿ  ವಿಷ್ಣ ಸಹಸ್ರನಾಮ  ಪಠಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT