ರಾಜ್ಯ

ಬೆಂಗಳೂರು: ಕೊಳೆತ ಸ್ಥಿತಿಯಲ್ಲಿ ಸಾಹಿತ್ಯ ಅಕಾಡೆಮಿ ಪುರಸ್ಕೃತ ಜಿ ನಂಜುಂಡನ್ ಮೃತದೇಹ ಪತ್ತೆ 

Sumana Upadhyaya

ಬೆಂಗಳೂರು: ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಜಿ ನಂಜುಂಡನ್ ಮೃತದೇಹ ಅವರ ನಿವಾಸದಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. 


ನಂಜುಂಡನ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶವಪರೀಕ್ಷೆ ವರದಿ ಸಿಗಬೇಕಾಗಿರುವುದರಿಂದ ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸರು ಹೇಳಿದ್ದಾರೆ.


2012ರಲ್ಲಿ ನಂಜುಂಡನ್ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕಾರ ಬಂದಿತ್ತು. ಬೆಂಗಳೂರು ವಿಶ್ವವಿದ್ಯಾಲಯದ ವೆಬ್ ಸೈಟ್ ಪ್ರಕಾರ, ಅವರು ಬೆಂಗಳೂರು ವಿ.ವಿಯ ಅಂಕಿಅಂಶ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದರು. ಹಲವು ವೃತ್ತಪತ್ರಿಕೆಗಳಲ್ಲಿ ಅವರು 10ಕ್ಕೂ ಹೆಚ್ಚು ಬರಹಗಳು ಪ್ರಕಟವಾಗಿವೆ. 

SCROLL FOR NEXT