ಸಾಂದರ್ಭಿಕ ಚಿತ್ರ 
ರಾಜ್ಯ

ಕೊಳ್ಳೇಗಾಲ: ಟಾಟಾ ಏಸ್ ಪಲ್ಟಿ; 12 ಮಂದಿಗೆ ಗಾಯ, 6 ಜನರ ಸ್ಥಿತಿ ಗಂಭೀರ

ಕಬ್ಬು ಕಟಾವು ಮಾಡಲು ಕೂಲಿ ಕಾರ್ಮಿಕರನ್ನು ಸಾಗಿಸುತ್ತಿದ್ದ ಟಾಟಾ ಏಸ್ ಪಲ್ಟಿಯಾಗಿ 12 ಮಂದಿ ಗಾಯಗೊಂಡಿದ್ದರೆ ಅವರಲ್ಲಿ 6 ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಚಾಮರಾಜನಗರ: ಕಬ್ಬು ಕಟಾವು ಮಾಡಲು ಕೂಲಿ ಕಾರ್ಮಿಕರನ್ನು ಸಾಗಿಸುತ್ತಿದ್ದ ಟಾಟಾ ಏಸ್ ಪಲ್ಟಿಯಾಗಿ 12 ಮಂದಿ ಗಾಯಗೊಂಡಿದ್ದರೆ ಅವರಲ್ಲಿ 6 ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಕೊಳ್ಳೇಗಾಲ ತಾಲೂಕಿನ ಮತ್ತಿಪುರ ಕ್ರಾಸ್​​​ನಲ್ಲಿ ಈ ಘಟನೆ ನಡೆದಿದೆ. ನರೀಪುರದಿಂದ 14 ಮಂದಿ ಕೂಲಿ ಕಾರ್ಮಿಕರನ್ನು ಕಬ್ಬು ಕಟಾವಿಗೆ ಕೂಲಿ ಕಾರ್ಮಿಕರನ್ನು ಟಾಟಾ ಏಸ್​​ ವಾಹನದಲ್ಲಿ ಕರೆತರುತ್ತಿದ್ದಾಗ ಈ ಅವಘಡ ಸಂಭವಿಸಿದೆ. 

ಕೊಳ್ಳೇಗಾಲ ಬಳಿ ರಸ್ತೆ ಅಪಘಾತ, 6 ಮಂದಿ ಸ್ಥಿತಿ ಗಂಭೀರಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್​ ಪಲ್ಟಿಯಾಗಿದೆ. 12 ಮಂದಿಗೆ ಗಾಯಗೊಂಡಿದ್ದು, ಅದರಲ್ಲಿ 6 ಕಾರ್ಮಿಕರು ಸಾವು-ಬದುಕಿನ ನಡುವೆ ಹೋರಾಟ ನಡೆಸಿದ್ದಾರೆ. 

ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ಸಾಗಿಸಲಾಗಿದೆ.ಉಳಿದ ಗಾಯಾಳುಗಳನ್ನು ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯ ಶಾಸಕ ಆರ್. ನರೇಂದ್ರ ಭೇಟಿ ನೀಡಿದ್ದಾರೆ. 

ಚಾಲಕನ ಅಜಾಗರೂಕತೆಯಿಂದಾಗಿ ಈ ಅವಘಡ ಸಂಭವಿಸಿದೆ ಎನ್ನಲಾಗ್ತಿದೆ. ಕೊಳ್ಳೇಗಾಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ:- ಗೂಳಿಪುರ ನಂದೀಶ ಎಂ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

‘ಕಾಶ್ಮೀರ ಎಂದಿಗೂ ಭಾರತದ್ದೇ, ಭಾರತದ್ದಾಗಿಯೇ ಉಳಿಯಲಿದೆ’; ವಿಶ್ವಸಂಸ್ಥೆಯಲ್ಲಿ ಪಾಕ್‌ಗೆ ಭಾರತ ತಿರುಗೇಟು..!

ರೀಲ್ಸ್ ಮಾಡಲು ನವಿಲುಗರಿ ಬಳಕೆ: ಕ್ಷಮೆ ಕೇಳಿದ ನಿವೇದಿತಾ ಗೌಡ, ಕಿಶನ್; ತನಿಖೆಗೂ ಸಹಕಾರ ಎಂದ ನಟಿ

ಶೋಯೆಬ್ ಅಖ್ತರ್ ಕುಟುಂಬದಲ್ಲಿ Tragedy; ಪಾಕ್ ಕ್ರಿಕೆಟ್ ದಿಗ್ಗಜನ ಅಣ್ಣ ನಿಗೂಢ ಸಾವು!

Trump ಯುದ್ಧ ನೀತಿಗೆ ಅಮೆರಿಕಾ ಸೆನೆಟ್ ಬ್ರೇಕ್: ಕಾಂಗ್ರೆಸ್ ಅನುಮತಿ ಇಲ್ಲದೆ ಸೇನಾ ಕಾರ್ಯಾಚರಣೆ ಬೇಡ; ಮಹತ್ವದ ನಿರ್ಣಯಕ್ಕೆ ಅನುಮೋದನೆ..!

ಹರಿಹರದಲ್ಲಿ ಶಂಕಿತ ಉಗ್ರನ ಬಂಧನ: ಅಯೋಧ್ಯೆಯ ರಾಮ ಮಂದಿರದಲ್ಲಿ ಬಾಂಬ್ ಸ್ಫೋಟಕ್ಕೆ ಸ್ಕೆಚ್, ಪೊಲೀಸರಿಂದ ಸ್ಫೋಟಕ ಮಾಹಿತಿ!