ರಾಜ್ಯ

'ಸೈದ್ಧಾಂತಿಕ ವಿರೋಧಿಗಳನ್ನು ರಾಜಕೀಯವಾಗಿ ಎದುರಿಸಲಾಗದವರ ಹತಾಶ ಪ್ರಯತ್ನ'

Shilpa D

ಬೆಂಗಳೂರು: ಬೆಂಗಳೂರಿನ ಸಿಪಿಐ ಕಚೇರಿಗೆ ಬೆಂಕಿ ಹಚ್ಚಿರುವುದು ಸೈದ್ಧಾಂತಿಕ ವಿರೋಧಿಗಳನ್ನು ರಾಜಕೀಯವಾಗಿ ಎದುರಿಸಲಾಗದವರ ಹತಾಶ ಪ್ರಯತ್ನ. ಈ ಕೃತ್ಯ ಎಸಗಿದ ದುಷ್ಕರ್ಮಿಗಳು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಬೆಂಕಿ ಹಚ್ಚಲು ಪ್ರಚೋದನೆ ನೀಡಿರುವ ದುಷ್ಟರನ್ನು ಪತ್ತೆ ಹಚ್ಚಿ ತಕ್ಷಣ ಬಂಧಿಸಬೇಕೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಬೆಂಗಳೂರಿನ ಮಲ್ಲೇಶ್ವರ ವಯ್ಯಾಲಿಕಾವಲ್‌ನಲ್ಲಿರುವ ಕಮ್ಯೂನಿಸ್ಟ್‌ ಪಕ್ಷದ ರಾಜ್ಯ ಕಚೇರಿ ಎದುರು ನಿಲ್ಲಿಸಿದ ಬೈಕ್ ಗಳಿಗೆ ದುಷ್ಕರ್ಮಿಗಳು ಕಳೆದ ರಾತ್ರಿ ಬೆಂಕಿ ಹಚ್ಚಿದ ಕಿಡಿಗೇಡಿಗಳು ಪರಾರಿಯಾಗಿದ್ದರು.

ನಿನ್ನೆ ರಾತ್ರಿ 1 ಗಂಟೆ ಸುಮಾರಿಗೆ ಬೈಕ್ ನಲ್ಲಿ ಬಂದ ನಾಲ್ಕು ಜನರು ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದು ಬಂದಿದೆ.

SCROLL FOR NEXT