ಬಸವರಾಜ ಬೊಮ್ಮಾಯಿ 
ರಾಜ್ಯ

ಮಂಗಳೂರು ಗಲಭೆ ಪೂರ್ವ ಯೋಜಿತ: ಗೃಹ ಸಚಿವ ಬಸವರಾಜ್ ಬೊಮ್ಮಾಯಿ 

ಮಂಗಳೂರು ಗಲಭೆ ಪೂರ್ವ ಯೋಜಿತವೇ? ಗೃಹ ಸಚಿವ ಬಸವರಾಜ್ ಬೊಮ್ಮಾಯಿಯವರ ಪ್ರಕಾರ ಹೌದು, ಗಲಭೆಗೆ ಮುನ್ನ ಸಾಕಷ್ಟು ಯೋಜನೆ ಹಾಕಿಕೊಂಡು ಕೇರಳದಿಂದ ಜನರನ್ನು ಕರೆದುಕೊಂಡು ಬಂದು ಪಿತೂರಿ ನಡೆಸಲಾಗಿದೆ ಎಂದು ಹೇಳಿಕೆ ನೀಡಿದ್ದಾರೆ.

ಬೆಂಗಳೂರು: ಮಂಗಳೂರು ಗಲಭೆ ಪೂರ್ವ ಯೋಜಿತವೇ? ಗೃಹ ಸಚಿವ ಬಸವರಾಜ್ ಬೊಮ್ಮಾಯಿಯವರ ಪ್ರಕಾರ ಹೌದು, ಗಲಭೆಗೆ ಮುನ್ನ ಸಾಕಷ್ಟು ಯೋಜನೆ ಹಾಕಿಕೊಂಡು ಕೇರಳದಿಂದ ಜನರನ್ನು ಕರೆದುಕೊಂಡು ಬಂದು ಪಿತೂರಿ ನಡೆಸಲಾಗಿದೆ ಎಂದು ಹೇಳಿಕೆ ನೀಡಿದ್ದಾರೆ.


ತಮ್ಮ ಹೇಳಿಕೆಗೆ ಪೂರಕವಾಗಿ ಬೊಮ್ಮಾಯಿಯವರು ಪೊಲೀಸರು ಬಿಡುಗಡೆ ಮಾಡಿರುವ ವಿಡಿಯೊ ತೋರಿಸುತ್ತಾರೆ. ಗಲಭೆಕೋರರು ಕಲ್ಲುಗಳನ್ನು ಗೂಡ್ಸ್ ರಿಕ್ಷಾದಲ್ಲಿ ತಂದು ತಮ್ಮ ಮುಖಗಳಿಗೆ ಮುಖವಾಡ ಹಾಕಿಕೊಂಡು ಸಿಸಿಟಿವಿ ಕ್ಯಾಮರಾಗಳಿಗೆ ಹಾನಿ ಮಾಡಿ ನಿರ್ಮಾಣ ಸ್ಥಳದಿಂದ ಇಟ್ಟಿಗೆಗಳನ್ನು ತಂದು ಆಸ್ಪತ್ರೆ ಆವರಣದಿಂದ ಕಲ್ಲು ತೂರಾಟ ಮಾಡಿದ್ದಾರೆ. ಮೊಲೊಟೊವ್ ಕಾಕ್ಟೈಲ್ ಗಳನ್ನು ಬಳಸಿದ್ದಾರೆ. ಇವುಗಳನ್ನೆಲ್ಲಾ ನೋಡಿದರೆ ಈ ಗಲಭೆ ಮಾಡಲು ಎರಡು-ಮೂರು ದಿನ ಹಿಂದೆಯೇ ಯೋಜನೆ ನಡೆಸಿದ್ದರು ಎಂಬುದು ಗೊತ್ತಾಗುತ್ತದೆ ಎಂದರು.


ಕೆಲ ವರ್ಷಗಳ ಹಿಂದೆ ಕೊಡಗಿನಲ್ಲಿ ಟಿಪ್ಪು ವಿರೋಧಿ ಪ್ರತಿಭಟನೆ, ಗಲಭೆ ನಡೆದ ವೇಳೆ ಬಿಜೆಪಿ ಆಗ ವಿರೋಧ ಪಕ್ಷದ ಸ್ಥಾನದಲ್ಲಿತ್ತು. ಆಗ ಸಹ ಗಲಭೆ ನಡೆಸಿದವರು ಕೇರಳದಿಂದ ಬಂದವರು ಎಂದು ಬಿಜೆಪಿ ಆರೋಪಿಸಿತ್ತು. ಓರ್ವ ಮೃತಪಟ್ಟಿದ್ದರು. ಹಿಂಸೆ ನಡೆಸಿರುವ ಸಾಕ್ಷಿ ಇರುವಾಗ ಪೊಲೀಸ್ ಗೋಲಿಬಾರ್ ನಲ್ಲಿ ಮೃತಪಟ್ಟ ಇಬ್ಬರು ಮುಗ್ಧರು ಎಂದು ಹೇಗೆ ಹೇಳುತ್ತೀರಿ ಎಂದು ಬೊಮ್ಮಾಯಿ ಕೇಳುತ್ತಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT