ಆನೆ ದಾಳಿ 
ರಾಜ್ಯ

ಕನಕಪುರದಲ್ಲಿ ಒಂಟಿ ಸಲಗ ದಾಳಿ, ಯುವಕ ಸಾವು

ಯುವಕರ ಗುಂಪೊಂದರ ಮೇಲೆ ದಾಳಿ ನಡೆಸಿದ ಒಂಟಿ ಸಲಗವೊಂದು ಓರ್ವನನ್ನು ಕಾಲಿನಿಂದ ತುಳಿದು ಸಾಯಿಸಿರುವ ಘಟನೆ ಕನಕಪುರ ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ಕನಕಪುರ-ಕೋಡಿಹಳ್ಳಿ ಮುಖ್ಯರಸ್ತೆಯ ನಾರಾಯಣಪುರ ಗ್ರಾಮ-ಅಂಕಚಾರಿ ದೊಡ್ಡಿ ಬಳಿ ನಡೆದಿದೆ.

ಬೆಂಗಳೂರು: ಯುವಕರ ಗುಂಪೊಂದರ ಮೇಲೆ ದಾಳಿ ನಡೆಸಿದ ಒಂಟಿ ಸಲಗವೊಂದು ಓರ್ವನನ್ನು ಕಾಲಿನಿಂದ ತುಳಿದು ಸಾಯಿಸಿರುವ ಘಟನೆ ಕನಕಪುರ ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ಕನಕಪುರ-ಕೋಡಿಹಳ್ಳಿ ಮುಖ್ಯರಸ್ತೆಯ ನಾರಾಯಣಪುರ ಗ್ರಾಮ-ಅಂಕಚಾರಿ ದೊಡ್ಡಿ ಬಳಿ ನಡೆದಿದೆ.

ಕನಕಪುರದ ಬೇಕುಪ್ಪೆಯ ಹೊಂಬೇಗೌಡ ಎಂಬುವರ ಪುತ್ರ ಚೇತನ್‌ಕುಮಾರ್ (21) ಮೃತಪಟ್ಟವರು. ಅವರೊಂದಿಗೆ ಇದ್ದ ಇನ್ನಿಬ್ಬರು ಸ್ನೇಹಿತರ ಅಲ್ಲಿಂದ ಓಡಿ ತಪ್ಪಿಸಿಕೊಂಡಿದ್ದಾರೆ. 

ಇಬ್ಬರು ಸ್ನೇಹಿತರೊಂದಿಗೆ ಚೇತನ್‌ಕುಮಾರ್ ಬುಧವಾರ ಮುಂಜಾನೆ ವಾಯುವಿಹಾರಕ್ಕೆ ತೆರಳಿದ್ದರು. ಕನಕಪುರ-ಕೋಡಿಹಳ್ಳಿ ಮುಖ್ಯರಸ್ತೆಯ ನಾರಾಯಣಪುರ ಗ್ರಾಮ-ಅಂಕಚಾರಿ ದೊಡ್ಡಿ ಬಳಿ ನಡೆದುಕೊಂಡು ಹೋಗುತ್ತಿದ್ದಾಗ ಇಬ್ಬರು ಸ್ನೇಹಿತರು ಸ್ವಲ್ಪ ಮುಂದೆ ಹೋಗಿದ್ದರು. ಚೇತನ್‌ಕುಮಾರ್ ನಿಧಾನವಾಗಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಲೆ ಏಕಾಏಕಿ ಒಂಟಿ ಸಲಗ ಎದುರಾಗಿದೆ. ತಕ್ಷಣ ಭಯಭೀತನಾದ ಚೇತನ್ ಸಹಾಯಕ್ಕಾಗಿ ಕೂಗಿಕೊಳ್ಳುತ್ತಾ ತಪ್ಪಿಸಿಕೊಳ್ಳಲು ಯತ್ನಿಸಿದರಾದರೂ ಸಫಲವಾಗದೆ ಆನೆಗೆ ಸಿಕ್ಕಿ ಸಾವನ್ನಪ್ಪಿದ್ದಾನೆ. ಕಿರುಚಾಟ ಕೇಳಿದ ಸ್ನೇಹಿತರು ಈತನ ಬಳಿಗೆ ಬರುವಷ್ಟರಲ್ಲಿ ಚೇತನ್ ಪ್ರಾಣಪಕ್ಷಿ ಹಾರಿಹೋಗಿತ್ತು.

ರಸ್ತೆ ತಡೆ: ಸುದ್ದಿ ಸುತ್ತಮುತ್ತಲ ಗ್ರಾಮಸ್ಥರು ಸ್ಥಳಕ್ಕೆ ದೌಡಾಯಿಸಿ ರಸ್ತೆಯಲ್ಲೇ ಕುಳಿತು ಪ್ರತಿಭಟನೆಗೆ ಮುಂದಾದರು. ಬನ್ನೇರುಘಟ್ಟ ರಾಷ್ಟ್ರೀಯ ಅರಣ್ಯ ಪ್ರದೇಶ ವ್ಯಾಪ್ತಿಯ ಬೆಟ್ಟಹಳ್ಳಿ ಕಾಡು ಮೂಲಕ ಆನೆಗಳು ನಾಡಿಗೆ ಬಂದು ತೊಂದರೆ ಕೊಡುತ್ತಿದೆ. ಅಪಾರ ಪ್ರಮಾಣದ ಬೆಳೆ ನಾಶ ಮಾಡುತ್ತಿದೆ. ಆದರೂ ಅರಣ್ಯ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.

ಇಂದಿನ ಘಟನೆ ಮೊದಲನೆಯದಲ್ಲ ಈಗಾಗಲೇ ನಾಲ್ವರು ಸಾವನ್ನಪ್ಪಿದ್ದಾರೆ. ಈ ಭಾಗದ ಅರಣ್ಯ ಇಲಾಖೆ ಕಾಡು ಪ್ರಾಣಿಗಳು ಗ್ರಾಮದೊಳಗೆ ಬರದಂತೆ ತಡೆಯಲು ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ರಸ್ತೆ ಮಧ್ಯೆಯೇ ಕುಳಿತು ಪ್ರತಿಭಟನೆ ನಡೆಸಿದರು. ಸುದ್ದಿ ತಿಳಿದ ಎಎಸ್‌ಪಿ ರಾಮರಾಜನ್, ಸರ್ಕಲ್ ಇನ್‌ಸ್ಪೆಕ್ಟರ್ ಪ್ರಕಾಶ್, ಗ್ರಾಮಾಂತರ ಪೊಲೀಸರು, ಡಿಎಫ್‌ಒ ಸದಾಶಿವಯ್ಯ ಎನ್.ಹೆಗಡೆ, ಡಿಆರ್‌ಎಫ್ ದೇವರಾಜ್ ಮತ್ತು ಅರಣ್ಯ ಸಿಬ್ಬಂದಿ ತೆರಳಿ ಪರಿಸ್ಥಿತಿಯನ್ನು ಅವಲೋಕಿಸಿದರು.

ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಪ್ರತಿಭಟನಕಾರರ ಮನವೊಲಿಸಿ ಸರ್ಕಾರದಿಂದ ಹಾಗೂ ಅರಣ್ಯ ಇಲಾಖೆ ವತಿಯಿಂದ ದೊರೆಯಬಹುದಾದಂತಹ ಸೂಕ್ತ ಪರಿಹಾರವನ್ನು ಮೃತನ ಕುಟುಂಬಕ್ಕೆ ಕೊಡಿಸುವುದಾಗಿ ಭರವಸೆ ನೀಡಿ ಪ್ರತಿಭಟನೆ ಹಿಂಪಡೆಯುವಂತೆ ಮನವಿ ಮಾಡಿದರು. ಅಧಿಕಾರಿಗಳ ಭರವಸೆಯ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪ್ರತಿಭಟನೆ ಹಿಂಪಡೆದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT