ಗ್ರಹಣದ ದಿನವೇ ನಡೀತು ಬರ್ಬರ ಹತ್ಯೆ! ಹಣಕ್ಕಾಗಿ ಸೋದರನನ್ನೇ ಕೊಂದ 
ರಾಜ್ಯ

ಗ್ರಹಣದ ದಿನವೇ ನಡೀತು ಬರ್ಬರ ಹತ್ಯೆ! ಹಣಕ್ಕಾಗಿ ಸೋದರನನ್ನೇ ಕೊಂದ

ಗ್ರಹಣದ ದಿನವಾದ ಗುರುವಾರ (ಡಿಸೆಂಬರ್ ೨೬)ರಂದೇ ಬರ್ಬರ ಹತ್ಯೆಗೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ಸಾಕ್ಷಿಯಾಗಿದೆ. ಹಣದ ವಿಚಾರದಲ್ಲಿ ಸೋದರರ ನಡುವೆ ಉಂತಾದ ಕಗಳ ತಮ್ಮನ ಕೊಲೆಯಲ್ಲಿ ಅಂತ್ಯ ಕಂಡ ಘಟನೆ ಬಂಟ್ವಾಳದ ಮೇಲ್ಕಾರ್ ಸಮೀಪ ಬೋಳಂಗಡಿ ಎಂಬಲ್ಲಿ ನಡೆದಿದೆ.

ಬಂಟ್ವಾಳ: ಗ್ರಹಣದ ದಿನವಾದ ಗುರುವಾರ (ಡಿಸೆಂಬರ್ ೨೬)ರಂದೇ ಬರ್ಬರ ಹತ್ಯೆಗೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ಸಾಕ್ಷಿಯಾಗಿದೆ. ಹಣದ ವಿಚಾರದಲ್ಲಿ ಸೋದರರ ನಡುವೆ ಉಂತಾದ ಕಗಳ ತಮ್ಮನ ಕೊಲೆಯಲ್ಲಿ ಅಂತ್ಯ ಕಂಡ ಘಟನೆ ಬಂಟ್ವಾಳದ ಮೇಲ್ಕಾರ್ ಸಮೀಪ ಬೋಳಂಗಡಿ ಎಂಬಲ್ಲಿ ನಡೆದಿದೆ.

ಬೋಳಂಗಡಿ ನಿವಾಸಿ ಲಿಯೋ ಲೋಬೊ(50) ಮೃತ ದುರ್ದೈವಿ. ಈತನ ಅಣ್ಣ ಸಿರಿಲ್ ಲೋಬೋ ಈ ಕೊಲೆ ಆರೋಪಿಯಾಗಿದ್ದಾನೆ. 

ಇಬ್ಬರೂ ಅವಿವಾಹಿತರಾಗಿದ್ದು ಒಟ್ಟಿಗೇ ಮನೆಯಲ್ಲಿ ವಾಸವಿದ್ದರು. ನಿತ್ಯ ಕುಡಿದು ಬರುತ್ತಿದ್ದು ಇಬ್ಬರ ನಡುವೆ ಹಣದ ವಿಚಾರದಲ್ಲಿ ಜಗಳವಾಗುತ್ತಿತ್ತು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. 

ಇಂದೂ ಕೂಡ ಬೆಳಿಗ್ಗೆ ಹತ್ತರ ಸುಮಾರಿಗೆ ಅಣ್ಣ ತಮ್ಮಂದಿರ ನಡುವೆ ಹಣದ ವಿಚಾರದಲ್ಲಿ ಜಗಳ ಪ್ರಾರಂಭವಾಗಿದೆ. ಇಬ್ಬರೂ ದೊಣ್ಣೆಗಳಲ್ಲಿ ಹೊಡೆದಾಡಿಕೊಂಡಿದ್ದಾರೆ. ದೊಣ್ಣೆ ಏಟಿಗೆ ತಮ್ಮ ಲಿಯೋ ಮನೆಯಲ್ಲೇ ಕುಸಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. 

ಇನ್ನು ಮೃತ ಲಿಯೋಗೆ ಆರೋಪಿಯಾದ ಅಣ್ಣ ಸಿರಿಲ್ ಸುಮಾರು ಒಂದೂವರೆ ಲಕ್ಷ ರು. ನೀಡಿದ್ದನೆನ್ನಲಾಗಿದ್ದು ಆ ಹಣ ವಾಪಾಸ್ ಕೊಡುವಂತೆ ಪೀಡಿಸುತ್ತಿದ್ದ ಎಂದು ಮಾಹಿತಿ ಬಂದಿದೆ. ಬಂಟ್ವಾಳ ವೃತ್ತ ನಿರೀಕ್ಷಕ ಟಿಡಿ ನಾಗರಾಜ್, ನಗರ ಠಾಣೆ ಸಿಬ್ಬಂದ್ ಅವಿನಾಶ್ ಹಾಗೂ ಇತರರು ಭೇಟಿ ನೀಡಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!