ಗ್ರಹಣದ ದಿನವೇ ನಡೀತು ಬರ್ಬರ ಹತ್ಯೆ! ಹಣಕ್ಕಾಗಿ ಸೋದರನನ್ನೇ ಕೊಂದ 
ರಾಜ್ಯ

ಗ್ರಹಣದ ದಿನವೇ ನಡೀತು ಬರ್ಬರ ಹತ್ಯೆ! ಹಣಕ್ಕಾಗಿ ಸೋದರನನ್ನೇ ಕೊಂದ

ಗ್ರಹಣದ ದಿನವಾದ ಗುರುವಾರ (ಡಿಸೆಂಬರ್ ೨೬)ರಂದೇ ಬರ್ಬರ ಹತ್ಯೆಗೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ಸಾಕ್ಷಿಯಾಗಿದೆ. ಹಣದ ವಿಚಾರದಲ್ಲಿ ಸೋದರರ ನಡುವೆ ಉಂತಾದ ಕಗಳ ತಮ್ಮನ ಕೊಲೆಯಲ್ಲಿ ಅಂತ್ಯ ಕಂಡ ಘಟನೆ ಬಂಟ್ವಾಳದ ಮೇಲ್ಕಾರ್ ಸಮೀಪ ಬೋಳಂಗಡಿ ಎಂಬಲ್ಲಿ ನಡೆದಿದೆ.

ಬಂಟ್ವಾಳ: ಗ್ರಹಣದ ದಿನವಾದ ಗುರುವಾರ (ಡಿಸೆಂಬರ್ ೨೬)ರಂದೇ ಬರ್ಬರ ಹತ್ಯೆಗೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ಸಾಕ್ಷಿಯಾಗಿದೆ. ಹಣದ ವಿಚಾರದಲ್ಲಿ ಸೋದರರ ನಡುವೆ ಉಂತಾದ ಕಗಳ ತಮ್ಮನ ಕೊಲೆಯಲ್ಲಿ ಅಂತ್ಯ ಕಂಡ ಘಟನೆ ಬಂಟ್ವಾಳದ ಮೇಲ್ಕಾರ್ ಸಮೀಪ ಬೋಳಂಗಡಿ ಎಂಬಲ್ಲಿ ನಡೆದಿದೆ.

ಬೋಳಂಗಡಿ ನಿವಾಸಿ ಲಿಯೋ ಲೋಬೊ(50) ಮೃತ ದುರ್ದೈವಿ. ಈತನ ಅಣ್ಣ ಸಿರಿಲ್ ಲೋಬೋ ಈ ಕೊಲೆ ಆರೋಪಿಯಾಗಿದ್ದಾನೆ. 

ಇಬ್ಬರೂ ಅವಿವಾಹಿತರಾಗಿದ್ದು ಒಟ್ಟಿಗೇ ಮನೆಯಲ್ಲಿ ವಾಸವಿದ್ದರು. ನಿತ್ಯ ಕುಡಿದು ಬರುತ್ತಿದ್ದು ಇಬ್ಬರ ನಡುವೆ ಹಣದ ವಿಚಾರದಲ್ಲಿ ಜಗಳವಾಗುತ್ತಿತ್ತು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. 

ಇಂದೂ ಕೂಡ ಬೆಳಿಗ್ಗೆ ಹತ್ತರ ಸುಮಾರಿಗೆ ಅಣ್ಣ ತಮ್ಮಂದಿರ ನಡುವೆ ಹಣದ ವಿಚಾರದಲ್ಲಿ ಜಗಳ ಪ್ರಾರಂಭವಾಗಿದೆ. ಇಬ್ಬರೂ ದೊಣ್ಣೆಗಳಲ್ಲಿ ಹೊಡೆದಾಡಿಕೊಂಡಿದ್ದಾರೆ. ದೊಣ್ಣೆ ಏಟಿಗೆ ತಮ್ಮ ಲಿಯೋ ಮನೆಯಲ್ಲೇ ಕುಸಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. 

ಇನ್ನು ಮೃತ ಲಿಯೋಗೆ ಆರೋಪಿಯಾದ ಅಣ್ಣ ಸಿರಿಲ್ ಸುಮಾರು ಒಂದೂವರೆ ಲಕ್ಷ ರು. ನೀಡಿದ್ದನೆನ್ನಲಾಗಿದ್ದು ಆ ಹಣ ವಾಪಾಸ್ ಕೊಡುವಂತೆ ಪೀಡಿಸುತ್ತಿದ್ದ ಎಂದು ಮಾಹಿತಿ ಬಂದಿದೆ. ಬಂಟ್ವಾಳ ವೃತ್ತ ನಿರೀಕ್ಷಕ ಟಿಡಿ ನಾಗರಾಜ್, ನಗರ ಠಾಣೆ ಸಿಬ್ಬಂದ್ ಅವಿನಾಶ್ ಹಾಗೂ ಇತರರು ಭೇಟಿ ನೀಡಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

SCROLL FOR NEXT