ರಾಜ್ಯ

ಪತ್ರಿಕೋದ್ಯಮ ಉಪನ್ಯಾಸಕ ಸುನಿಲ್ ಬಾದ್ರಿ ನಿಧನ

Raghavendra Adiga

ಉಡುಪಿ: ಖ್ಯಾತ ಪತ್ರಿಕೋದ್ಯಮ ಉಪನ್ಯಾಸಕ ಸುನಿಲ್ ಬಾದ್ರಿ[42].ತೀವ್ರ ಅನಾರೋಗ್ಯದಿಂದಾಗಿ ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಸುನಿಲ್ ಗುರುವಾರ ನಿಧನರಾಗಿದ್ದಾರೆ.

ಹುಬ್ಬಳ್ಳಿ ಮೂಲದವರಾದ ಸುನಿಲ್ ಮೈಸೂರು, ಹುಬ್ಬಳ್ಳಿಗಳಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿ ಹೈದರಾಬಾದ್ ಸೆಂಟ್ರಲ್ ಯುನಿವರ್ಸಿಟಿಯಲ್ಲಿ ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆಇದ್ದರು. ಶಿವಮೊಗ್ಗ ಜಿಲ್ಲೆ ಸಾಗರದಲ್ಲಿನ ಎಲ್.ಬಿ & ಎಸ್.ಬಿ.ಎಸ್ ಕಾಲೇಜಿನಲ್ಲಿ ಪತ್ರಿಕೋದ್ಯಮ ಉಪನ್ಯಾಸಕ ವೃತ್ತಿ ಪ್ರಾರಂಭಿಸಿದ ಸುನಿಲ್ ಇದೀಗ ಮಾಹೆ ವಿಶ್ವವಿದ್ಯಾಲಯದ ಕಮ್ಯುನಿಕೇಷನ್ ವಿಭಾಗದಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದರು.

ತಬಲಾ ವಾದಕರೂ ಆಗಿದ್ದ ಸುನಿಲ್ ತಮ್ಮ ನಿಸ್ವಾರ್ಥ ಸೇವೆಯ ಮೂಲಕ ಹಲವಾರು ಯುವಕ ಯುವತಿಯರನ್ನು ಪತ್ರಿಕೋದ್ಯಮ ಕ್ಷೇತ್ರಕ್ಕೆ ನಿಡಿದ್ದಾರೆ. 

ಸುನಿಲ್ ಸಾವಿಗೆ  ಅನೇಕ ಗಣ್ಯರು, ಪತ್ರಿಕೋದ್ಯಮ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಸಂತಾಪ ಸೂಚಿಸಿದ್ದಾರೆ.

SCROLL FOR NEXT