ಖಾದರ್ 
ರಾಜ್ಯ

ಮಂಗಳೂರು ಹಿಂಸಾಚಾರ: ಮೃತರ ಪರಿಹಾರಕ್ಕೆ ತಡೆ- ಸ್ಪಷ್ಟನೆಗೆ ಖಾದರ್ ಆಗ್ರಹ

ಮಂಗಳೂರು ಗೋಲಿಬಾರ್ ನಲ್ಲಿ ಮೃತಪಟ್ಟಿದ್ದ ಕುಟುಂಬಸ್ಥರಿಗೆ ನೀಡಲಾಗಿದ್ದ ಪರಿಹಾರಕ್ಕೆ ರಾಜ್ಯ ಸರ್ಕಾರ ತಡೆ ನೀಡಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡುವಂತೆ ಮಂಗಳೂರು ಶಾಸಕ ಯುಟಿ ಖಾದರ್ ಅವರು ಆಗ್ರಹಿಸಿದ್ದಾರೆ. 

ಮಂಗಳೂರು: ಮಂಗಳೂರು ಗೋಲಿಬಾರ್ ನಲ್ಲಿ ಮೃತಪಟ್ಟಿದ್ದ ಕುಟುಂಬಸ್ಥರಿಗೆ ನೀಡಲಾಗಿದ್ದ ಪರಿಹಾರಕ್ಕೆ ರಾಜ್ಯ ಸರ್ಕಾರ ತಡೆ ನೀಡಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡುವಂತೆ ಮಂಗಳೂರು ಶಾಸಕ ಯುಟಿ ಖಾದರ್ ಅವರು ಆಗ್ರಹಿಸಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು. ಮೃತರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ರೂ.10 ಲಕ್ಷ ಪರಿಹಾರ ಘೋಷಣೆ ಮಾಡಿದ್ದರು. ಇದೀಗ ಪರಿಹಾರಕ್ಕೆ ತಡೆ ನೀಡಿದ್ದಾರೆ. ಯಾರ ಸಲಹೆ ಮೇರೆಗೆ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂಬುದನ್ನು ರಾಜ್ಯ ಸರ್ಕಾರ ಸ್ಪಷ್ಟಪಡಿಸಬೇಕು. ಪರಿಹಾರಕ್ಕೆ ತಡೆ ನೀಡಿರುವುದು ಮೃತರ ಕುಟುಂಬಕ್ಕೆ ಅವಮಾನ ಮಾಡಿದಂತೆ. ಯಡಿಯೂರಪ್ಪ ಕೂಡಲೇ ಈ ಕುರಿತು ಕ್ಷಮೆಯಾಚಿಸಬೇಕೆಂದು ಎಂದು ಹೇಳಿದ್ದಾರೆ.

ಈ ಹಿಂದೆ ಬಿಜೆಪಿ ಅಧಿಕಾರದಲ್ಲಿದ್ದಾಗ ಮುಲ್ಕಿಯಲ್ಲಿ ಗೋಲಿಬಾರ್ ನಡೆದಿತ್ತು. ಈ ವೇಳೆ ಮೃತರಿಗೆ ಪರಿಹಾರದೊಂದಿಗೆ ಗೌರವವನ್ನೂ ನೀಡಲಾಗಿತ್ತು. ಆದರೆ. ಈ ಬಾರಿ ಅದೇ ಸರ್ಕಾರ ಆಡಳಿತದಲ್ಲಿದ್ದರೂ ಸಾಕಷ್ಟು ಗೊಂದಲಗಳನ್ನು ಸೃಷ್ಟಿಸುತ್ತಿದೆ. ಈ ರೀತಿಯ ಘಟನೆಗಳು ಮರುಕಳಿಸಬಾರದು. ಜಿಲ್ಲಾ ಸಚಿವ ಕೋಟಾ ಶ್ರೀನಿವಾಸ ಪೂಜಾರಿಯವರು ಶಾಂತಿಯುತ ಸಭೆ ನಡೆಸಬೇಕು ಎಂದು ತಿಳಿಸಿದ್ದಾರೆ. 

ರಾಜ್ಯದಲ್ಲಿ ಎನ್ಆರ್'ಸಿ ಜಾರಿಗೊಳಿಸಬಾರದು. ನಮ್ಮ ಸಂವಿಧಾನದ ಪ್ರಕಾರ 3 ರಾಜ್ಯಗಳ ಪೈಕಿ ಎರಡು ರಾಜ್ಯ ಕಾಯ್ದೆಗೆ ಒಪ್ಪಿಗೆ ಸೂಚಿಸಬೇಕು. ಆದರೆ, ಹಲವು ರಾಜ್ಯಗಳು ಎನ್ಆರ್'ಸಿಗೆ ವಿರೋಧ ವ್ಯಕ್ತಪಡಿಸುತ್ತಿವೆ. ಹೀಗಾಗಿ ಕಾಯ್ದೆಯನ್ನು ಜಾರಿಗೆ ತರಬಾರದು ಎಂದು ಹೇಳಿದ್ದಾರೆ.

ಇದೇ ವೇಳೆ ಗಲಭೆ ಸೃಷ್ಟಿಸಿದವರು ಆಸ್ತಿ ಜಪ್ತಿ ಮಾಡುವ ಸಿಟಿ ರವಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ರವಿಯವರು ಚಿಕ್ಕಮಗಳೂರು ಮೂಲದವರು. ಹೀಗಾಗಿ ಮಂಗಳೂರಿನ ಬಗ್ಗೆ ಮಾತನಾಡುವ ಅವಶ್ಯಕತೆ ಅವರಿಗಿಲ್ಲ. ಮಂಗಳೂರು ವಿಚಾರದ ಬಗ್ಗೆ ಇತರೆ ಜಿಲ್ಲೆಗಳ ಜನರ ಮಾತನಾಡುವ ಅಗತ್ಯವಿಲ್ಲ ಎಂದಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ