ತೀರ್ಥಹಳ್ಳಿ: ವಿಕಲಚೇತನ ಯುವತಿ ಮೇಲೆ ಅತ್ಯಾಚಾರ ಯತ್ನ ನಡೆಸಿದ ಯುವಕನಿಗೆ ಗೂಸಾ 
ರಾಜ್ಯ

ತೀರ್ಥಹಳ್ಳಿ: ವಿಕಲಚೇತನ ಯುವತಿ ಮೇಲೆ ಅತ್ಯಾಚಾರ ಯತ್ನ ನಡೆಸಿದ ಯುವಕನಿಗೆ ಗೂಸಾ

ಯುವಕನೊಬ್ಬ ವಿಕಲಚೇತನ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಸಾರ್ವಜನಿಕರಿಂದ ಗೂಸಾ ತಿಂದ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಗಾರ್ಡರಗದ್ದೆಯಲ್ಲಿ ನಡೆದಿದೆ.

ತೀರ್ಥಹಳ್ಳಿ: ಯುವಕನೊಬ್ಬ ವಿಕಲಚೇತನ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಸಾರ್ವಜನಿಕರಿಂದ ಗೂಸಾ ತಿಂದ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಗಾರ್ಡರಗದ್ದೆಯಲ್ಲಿ ನಡೆದಿದೆ.

ವಿಕಲಚೇತನ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ತೀರ್ಥಹಳ್ಳಿಯ ಶಿವರಾಜಪುರದಗ್ರಾಮದ  ಸತೀಶ್(38) ಎಂಬಾತನಿಗೆ ಸಾರ್ವಜನಿಕರು ಗೂಸಾ ನೀಡ್ದ್ದು ಪೋಲೀಸರಿಗೆ ಒಪ್ಪಿಸಿದ್ದಾರೆ.

 25 ವರ್ಷದ ವಿಕಲ ಚೇತನ ಯುವತಿಯನ್ನು ಅವಳ ವೀಲ್ ಚೇರ್​ಗೆ ಕಟ್ಟಿ ಹಾಕಿ ಅತ್ಯಾಚಾರಕ್ಕೆ ಸತೀಶ್ ಯತ್ನ ನಡೆಸಿದ್ದ ಆ ವೇಳೆ ಯುವತಿ ಗಟ್ಟಿಯಾಗಿ ಕೂಗಿದ್ದಾಳೆ. ಇದರಿಂದ ನೆರೆಹೊರೆಯವರು, ಗ್ರಾಮಸ್ಥರು ಆಗಮಿಸಿದ್ದು ಸತೀಶ್ ನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ. ಬಳಿಕ ಆತನನ್ನು ಪೋಲೀಸರಿಗೆ ಒಪ್ಪಿಸಲಾಗಿದೆ.

ಆರೋಪಿ ಸತೀಶ್ ವಿವಾಹಿತನಾಗಿದ್ದು ಪತ್ನಿಯ ಸಹೋದರನ ಮನೆಗೆ ಆಗಮಿಸಿದ್ದನೆನ್ನಲಾಗಿದೆ. ಆದರೆ ವಿಕಲಚೇತನ ಯುವತಿ ಒಬ್ಬಳೇ ಇದ್ದ ವೇಳೆ ಆಕೆಯ ಮನೆಗೆ ನುಗ್ಗಿದ ಸತೀಶ್ ಆಕೆಯ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಸಧ್ಯ ಯುವತಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ತೀರ್ಥಹಳ್ಳಿ ತಾಲೂಕು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಘಟನೆ ಸಂಬಂಧ ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT