ಸಂಗ್ರಹ ಚಿತ್ರ 
ರಾಜ್ಯ

ಚಾರ್ಮಾಡಿ ಘಾಟ್ ರಸ್ತೆ ದುರಸ್ತಿ: ಭಾರಿ ವಾಹನಗಳಿಗೆ ನಿಷೇಧ; ಲಘು ವಾಹನಗಳ ಸಂಚಾರ ಆರಂಭ

ಚಾರ್ಮಾಡಿ ಘಾಟ್ ರಸ್ತೆ ದುರಸ್ತಿ  ಹಿನ್ನೆಲೆಯಲ್ಲಿ ಇಂದಿನಿಂದ ಭಾರಿ  ವಾಹನಗಳ ಸಂಚಾರ ನಿಷೇಧ ಮಾಡಲಾಗಿದೆ.

ಮಂಗಳೂರು:  ಚಾರ್ಮಾಡಿ ಘಾಟ್ ರಸ್ತೆ ದುರಸ್ತಿ  ಹಿನ್ನೆಲೆಯಲ್ಲಿ ಇಂದಿನಿಂದ ಭಾರಿ  ವಾಹನಗಳ ಸಂಚಾರ ನಿಷೇಧ ಮಾಡಲಾಗಿದೆ.

ಆದರೆ  ಮಿನಿ ವಾಹನಗಳ ಸಂಚಾರಕ್ಕೆ ಯಾವುದೆ ತೊಂದರೆಯಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಹೇಳಿದ್ದಾರೆ.  

ಕಾರು, ಮಿನಿ ಟೆಂಪೋ ಹಾಗೂ ಮಿನಿ ಕೆ.ಎಸ್.ಆರ್.ಟಿ.ಸಿ ಬಸ್ಗಳಿಗೆ ಮಾತ್ರ ಈ ರಸ್ತೆಯಲ್ಲಿ ಸಂಚರಿಸುವ ಅವಕಾಶ ಕಲ್ಪಿಸಲಾಗಿದೆ. ಭಾರಿ  ವಾಹನಗಳಾದ ಟ್ಯಾಂಕರ್, ರಾಜಹಂಸ ಬಸ್ ಸೇರಿದಂತೆ ಇತರೆ ವಾಹನಗಳ ಸಂಚಾರ ನಿಷೇಧ ಮಾಡಲಾಗಿದ್ದು  ಮುಂದಿನ ಆದೇಶದವರೆಗೂ ಈ ವ್ಯವಸ್ಥೆ ಜಾರಿಯಲ್ಲಿದೆ.

ಮುಂದಿನ ಆದೇಶದವರೆಗೂ ಪರ್ಯಾಯ ರಸ್ತೆ ಮೂಲಕ ತೆರಳಲು ಪ್ರಯಾಣಿಕರಿಗೆ ಸೂಚನೆ ನೀಡಲಾಗಿದೆ.
ಕಾರ್ಕಳ-ಸಂಸೆ-ಕುದುರೆಮುಖ ರಸ್ತೆ ಮತ್ತು ಶಿರಾಡಿ ರಸ್ತೆಗ ಮೂಲಕ ಪ್ರಯಾಣಿಕರು ತೆರಳಲು ಅವಕಾಶ ನೀಡಲಾಗಿದೆ.

ಚಾರ್ಮಾಡಿ ಘಾಟ್ ಮಂಗಳೂರು-ಕಡೂರು ರಾಷ್ಟ್ರೀಯ ಹೆದ್ದಾರಿಯಲ್ಲಿದೆ. ಈ ವರ್ಷ ಮಲೆನಾಡು ಪ್ರದೇಶದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಚಾರ್ಮಾಡಿ ಘಾಟಿನಲ್ಲಿ ಪದೇ ಪದೇ ಭೂ ಕುಸಿತ ಉಂಟಾಗಿತ್ತು. 

ಹೀಗಾಗಿ ಆಗಸ್ಟ್ ತಿಂಗಳಿಂದ  ವಾಹನ ಸಂಚಾರ ಬಂದ್ ಮಾಡಲಾಗಿತ್ತು. ಇದೀಗ ಸಾರ್ವಜನಿಕರ ಹಿತದೃಷ್ಟಿಯಿಂದ ಇಂದಿನಿಂದ ಮಿನಿ ಲಘು ವಾಹನಗಳ ಸಂಚಾರ ಆರಂಭಕ್ಕೆ  ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಆದೇಶ ಹೊರಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT