ಪೇಜಾವರ ಶ್ರೀಗಳು (ಸಂಗ್ರಹ ಚಿತ್ರ) 
ರಾಜ್ಯ

ಜೀವರಕ್ಷಕ ವ್ಯವಸ್ಥೆಯೊಂದಿಗೆ ಪೇಜಾವರ ಶ್ರೀ ಕೃಷ್ಣಮಠಕ್ಕೆ ಸ್ಥಳಾಂತರ

ತೀವ್ರ ಅನಾರೋಗ್ಯಕ್ಕೆ ತುತ್ತಾಗಿರುವ ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರನ್ನು ನಾಳೆ ಉಡುಪಿ ಕೃಷ್ಣ ಮಠಕ್ಕೆ ಸಕಲ ಜೀವರಕ್ಷಕ ವ್ಯವಸ್ಥೆಯೊಂದಿಗೆ ಸ್ಥಳಾಂತರ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.

ಉಡುಪಿ: ತೀವ್ರ ಅನಾರೋಗ್ಯಕ್ಕೆ ತುತ್ತಾಗಿರುವ ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರನ್ನು ನಾಳೆ ಉಡುಪಿ ಕೃಷ್ಣ ಮಠಕ್ಕೆ ಸಕಲ ಜೀವರಕ್ಷಕ ವ್ಯವಸ್ಥೆಯೊಂದಿಗೆ ಸ್ಥಳಾಂತರ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.

ಈ ಕುರಿತಂತೆ ಮಾಧ್ಯಮಗಳು ವರದಿ ಮಾಡಿದ್ದು, 'ಪೇಜಾವರ ಶ್ರೀಗಳ ಆರೋಗ್ಯ ಚೇತರಿಕೆಯಾಗುವ ಯಾವ ಲಕ್ಷಣಗಳು ಕಾಣುತ್ತಿಲ್ಲವಾದ್ದರಿಂದ ಶ್ರೀಗಳ ಅಂತಿಮ ಆಸೆಯಂತೆ ಭಾನುವಾರ ಅವರನ್ನು ಮಠಕ್ಕೆ ಸ್ಥಳಾಂತರ ಮಾಡಲಾಗುತ್ತದೆ ಎಂದು ಪೇಜಾವರ ಮಠದ ಕಿರಿಯ ಯತಿ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ ಎನ್ನಲಾಗಿದೆ.

ಈ ಕುರಿತಂತೆ ಶನಿವಾರ ಸಂಜೆ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಕಿರಿಯ ಶ್ರೀಗಳು ‘ಶ್ರೀಗಳು ಚೇತರಿಸಿಕೊಳ್ಳಲು ಸಾಧ್ಯವಿಲ್ಲ ಎಂದು ವೈದ್ಯರು ಖಚಿತಪಡಿಸಿದ್ದಾರೆ. ಹಾಗಾಗಿ, ಆಸ್ಪತ್ರೆಯಲ್ಲಿಟ್ಟುಕೊಳ್ಳುವ ಬದಲು ಮಠಕ್ಕೆ ಸ್ಥಳಾಂತರಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಶ್ರೀಗಳು ಬದುಕಿರುವಷ್ಟು ದಿನಗಳು ಕೃಷ್ಣಮಠದ ಆವರಣದಲ್ಲಿ ಇರಲಿ ಎಂಬುದು ಎಲ್ಲರ ಅಪೇಕ್ಷೆ. ಅಗತ್ಯ ಜೀವರಕ್ಷಕಗಳ ವ್ಯವಸ್ಥೆಯೊಂದಿಗೆ ಗುರುಗಳನ್ನು ಮಠಕ್ಕೆ ಸಾಗಿಸಲಾಗುವುದು. ಅಲ್ಲಿಯೇ ತಜ್ಞ ವೈದ್ಯರು ಚಿಕಿತ್ಸೆ ಮುಂದುವರಿಸಲಿದ್ದಾರೆ ಎಂದು ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ ಎನ್ನಲಾಗಿದೆ.

ಹೆಚ್ಚಿನ ಚಿಕಿತ್ಸೆಗೆ ಬೇರೆ ಆಸ್ಪತ್ರೆಗೆ ಕರೆದೊಯ್ಯುವುದಿಲ್ಲ. ಈಗಾಗಲೇ ದೆಹಲಿಯ ಏಮ್ಸ್‌ ಹಾಗೂ ಕೆಎಂಸಿ ತಜ್ಞ ವೈದ್ಯರು ಶಕ್ತಿಮೀರಿ ಪ್ರಯತ್ನಿಸಿದ್ದಾರೆ ಎಂದು ಕಿರಿಯ ಶ್ರೀಗಳು ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT