ಪೇಜಾವರ ಶ್ರೀಗಳು 
ರಾಜ್ಯ

ಆಪರೇಷನ್ ನಡೆದಾಗ ಕಡೆಯ ಆಸೆ ತೋಡಿಕೊಂಡಿದ್ದ ಶ್ರೀಗಳು : ಯತಿಗಳ ಕೊನೆಯಾಸೆ ಏನು?

ಹರ್ನಿಯಾ ಆಪರೇಷನ್ ನಡೆದಾಗಲೇ ಪೇಜಾವರ ಶ್ರೀಗಳು ತಮ್ಮ ಕೊನೆಯಾಸೆ ಬಿಚ್ಚಿಟ್ಟಿದ್ದರು. ಲಿಖಿತ ರೂಪದಲ್ಲಿ ಕೊನೆಯಾಸೆಯನ್ನು ಶ್ರೀಗಳು ಬರೆದುಕೊಟ್ಟಿದ್ದರು.

ಬೆಂಗಳೂರು: ಹರ್ನಿಯಾ ಆಪರೇಷನ್ ನಡೆದಾಗಲೇ ಪೇಜಾವರ ಶ್ರೀಗಳು ತಮ್ಮ ಕೊನೆಯಾಸೆ ಬಿಚ್ಚಿಟ್ಟಿದ್ದರು. ಲಿಖಿತ ರೂಪದಲ್ಲಿ ಕೊನೆಯಾಸೆಯನ್ನು ಶ್ರೀಗಳು ಬರೆದುಕೊಟ್ಟಿದ್ದರು.

ಬೆಂಗಳೂರಿನ ವಿದ್ಯಾಪೀಠದಲ್ಲಿ ಅಂತಿಮ ಕ್ರಿಯಾ ವಿಧಿವಿಧಾನ ನಡೆಯಬೇಕು ಎಂದು ಪೇಜಾವರ ಶ್ರೀಗಳು ಲಿಖಿತ ರೂಪದಲ್ಲಿ ಬರೆದುಕೊಟ್ಟಿದ್ದರು. 

ಲಿಖಿತ ರೂಪದಲ್ಲಿ ಬರೆದು ಆಗಾಗ ಕಿರಿಯ ಶ್ರೀಗಳಿಗೆ ಅದನ್ನು ತೋರಿಸುತ್ತಿದ್ದರು. ಜಾಗವನ್ನು ಕೂಡ ಸೂಚಿಸಿ, ಇಲ್ಲೇ ನನ್ನ ಬೃಂದಾವನ ಆಗಬೇಕು ಎಂದು ಶ್ರೀಗಳು ಬರೆದು ಕೊಟ್ಟಿದ್ದರು. ಕಳೆದ ಬಾರಿ ಹರ್ನಿಯಾ ಅಪರೇಷನ್‍ಗೆ ಒಳಗಾಗಿದ್ದ ಶ್ರೀಗಳು ತಮ್ಮ ಕೊನೆಯಾಸೆಯ ಬಗ್ಗೆ ತಿಳಿಸಿದ್ದರು ಎಂದು ಮಾಧ್ಯಮಗಳು ವರದಿ ಮಾಡಿವೆ.

ಶ್ರೀಗಳ ಕೊನೆ ಆಸೆಯಂತೆ ಅವರ ಅಂತ್ಯಸಂಸ್ಕಾರ ಬೆಂಗಳೂರಿನ ವಿದ್ಯಾಪೀಠದಲ್ಲಿ ನಡೆಯಲಿದೆ. ಮದ್ವ ಸರೋವರದಲ್ಲಿ ಶ್ರೀಗಳಿಗೆ ಸ್ನಾನ ಮಾಡಿಸಿ ಕೃಷ್ಣನ ದರ್ಶನ ಮಾಡಿಸಲಾಗುತ್ತದೆ. ಅಲ್ಲಿಂದ ನೇರವಾಗಿ ಅಜ್ಜರ ಕಾಡು ಕ್ರೀಡಾಂಗಣದಲ್ಲಿ ಪಾರ್ಥಿವ ಶರೀರವನ್ನು ಇರಿಸಲಾಗುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT