ಪೇಜಾವರ ಶ್ರೀಗಳು 
ರಾಜ್ಯ

ಆಪರೇಷನ್ ನಡೆದಾಗ ಕಡೆಯ ಆಸೆ ತೋಡಿಕೊಂಡಿದ್ದ ಶ್ರೀಗಳು : ಯತಿಗಳ ಕೊನೆಯಾಸೆ ಏನು?

ಹರ್ನಿಯಾ ಆಪರೇಷನ್ ನಡೆದಾಗಲೇ ಪೇಜಾವರ ಶ್ರೀಗಳು ತಮ್ಮ ಕೊನೆಯಾಸೆ ಬಿಚ್ಚಿಟ್ಟಿದ್ದರು. ಲಿಖಿತ ರೂಪದಲ್ಲಿ ಕೊನೆಯಾಸೆಯನ್ನು ಶ್ರೀಗಳು ಬರೆದುಕೊಟ್ಟಿದ್ದರು.

ಬೆಂಗಳೂರು: ಹರ್ನಿಯಾ ಆಪರೇಷನ್ ನಡೆದಾಗಲೇ ಪೇಜಾವರ ಶ್ರೀಗಳು ತಮ್ಮ ಕೊನೆಯಾಸೆ ಬಿಚ್ಚಿಟ್ಟಿದ್ದರು. ಲಿಖಿತ ರೂಪದಲ್ಲಿ ಕೊನೆಯಾಸೆಯನ್ನು ಶ್ರೀಗಳು ಬರೆದುಕೊಟ್ಟಿದ್ದರು.

ಬೆಂಗಳೂರಿನ ವಿದ್ಯಾಪೀಠದಲ್ಲಿ ಅಂತಿಮ ಕ್ರಿಯಾ ವಿಧಿವಿಧಾನ ನಡೆಯಬೇಕು ಎಂದು ಪೇಜಾವರ ಶ್ರೀಗಳು ಲಿಖಿತ ರೂಪದಲ್ಲಿ ಬರೆದುಕೊಟ್ಟಿದ್ದರು. 

ಲಿಖಿತ ರೂಪದಲ್ಲಿ ಬರೆದು ಆಗಾಗ ಕಿರಿಯ ಶ್ರೀಗಳಿಗೆ ಅದನ್ನು ತೋರಿಸುತ್ತಿದ್ದರು. ಜಾಗವನ್ನು ಕೂಡ ಸೂಚಿಸಿ, ಇಲ್ಲೇ ನನ್ನ ಬೃಂದಾವನ ಆಗಬೇಕು ಎಂದು ಶ್ರೀಗಳು ಬರೆದು ಕೊಟ್ಟಿದ್ದರು. ಕಳೆದ ಬಾರಿ ಹರ್ನಿಯಾ ಅಪರೇಷನ್‍ಗೆ ಒಳಗಾಗಿದ್ದ ಶ್ರೀಗಳು ತಮ್ಮ ಕೊನೆಯಾಸೆಯ ಬಗ್ಗೆ ತಿಳಿಸಿದ್ದರು ಎಂದು ಮಾಧ್ಯಮಗಳು ವರದಿ ಮಾಡಿವೆ.

ಶ್ರೀಗಳ ಕೊನೆ ಆಸೆಯಂತೆ ಅವರ ಅಂತ್ಯಸಂಸ್ಕಾರ ಬೆಂಗಳೂರಿನ ವಿದ್ಯಾಪೀಠದಲ್ಲಿ ನಡೆಯಲಿದೆ. ಮದ್ವ ಸರೋವರದಲ್ಲಿ ಶ್ರೀಗಳಿಗೆ ಸ್ನಾನ ಮಾಡಿಸಿ ಕೃಷ್ಣನ ದರ್ಶನ ಮಾಡಿಸಲಾಗುತ್ತದೆ. ಅಲ್ಲಿಂದ ನೇರವಾಗಿ ಅಜ್ಜರ ಕಾಡು ಕ್ರೀಡಾಂಗಣದಲ್ಲಿ ಪಾರ್ಥಿವ ಶರೀರವನ್ನು ಇರಿಸಲಾಗುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೋಲ್ಕತ್ತಾದಲ್ಲಿ ಭೀಕರ ದುರಂತ: ನಿರ್ಮಾಣ ಹಂತದ ಗೋದಾಮು ಕುಸಿದು 5 ಕಾರ್ಮಿಕರ ಸಾವು, 20 ಮಂದಿ ರಕ್ಷಣೆ; TMC ಅವಧಿಯ ಯೋಜನೆಗಳಿಗೆ CM ಸುವೇಂದು ಬ್ರೇಕ್..!

ಇರಾನ್ ಸಂಘರ್ಷಕ್ಕೆ $70 ಬಿಲಿಯನ್ ತುರ್ತು ನಿಧಿ ಕೋರಿದ ಅಮೆರಿಕಾ: ಟ್ರಂಪ್ ವಿರುದ್ಧ ಸಿಡಿದೆದ್ದ Republican senator, ಸ್ವಪಕ್ಷದಲ್ಲೇ ಭಿನ್ನಮತ ಸ್ಫೋಟ..!

Passport ಪೌರತ್ವದ ಪ್ರಮಾಣಪತ್ರವಲ್ಲ, Travel document ಅಷ್ಟೇ: MEA ಸ್ಪಷ್ಟನೆ, ಹೊಸ ಚರ್ಚೆಗೆ ನಾಂದಿ..!

ಭೂಕಂಪದ ರೌದ್ರನರ್ತನಕ್ಕೆ Venezuela ತತ್ತರ; Caracasನಲ್ಲಿ ಧರೆಗುರುಳಿದ ಕಟ್ಟಡಗಳು, ಸುನಾಮಿ ಎಚ್ಚರಿಕೆ..!

X ಖಾತೆ ನಿರ್ಬಂಧ ವಿವಾದ: ನಮ್ಮನ್ನು ಭಯೋತ್ಪಾದಕರು ಎನ್ನುತ್ತೀರಾ? ನಾಚಿಕೆಯಾಗುವುದಿಲ್ಲವೇ ನಿಮಗೆ?; ಕೇಂದ್ರದ ವಿರುದ್ಧ Cockroach Janta Party ಕಿಡಿ..!