ನವದೆಹಲಿ: ಪೇಜಾವರ ಮಠದ ಹಿರಿಯ ಯತಿ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಗಳು ಕೃಷ್ಣೈಕ್ಯರಾಗಿರುವ ಹಿನ್ನೆಲೆಯಲ್ಲಿ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿರುವ ಮಾಜಿ ಪ್ರಧಾನಿ ದೇವೇಗೌಡ, ನಳಿನ್ ಕುಮಾರ್ ಕಟೀಲ್, ಸಿದ್ದರಾಮಯ್ಯ, ಹೆಚ್.ಡಿ.ಕುಮಾರಸ್ವಾಮಿ, ಡಾ.ಜಿ. ಪರಮೇಶ್ವರ್, ಶೋಭಾ ಕರಂದ್ಲಾಜೆ, ಸಚಿವ ಸುರೇಶ್ ಕುಮಾರ್, ಆರ್. ಅಶೋಕ್, ಜಗದೀಶ್ ಶೆಟ್ಟರ್, ಸಿಟಿ.ರವಿ, ಸೇರಿದಂತೆ ಹಲವು ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದಾರೆ.
ಉಡುಪಿಯ ಅಷ್ಟ ಮಠಗಳಲ್ಲಿ ಒಂದಾದ ಪೇಜಾವರ ಅಧೋಕ್ಷಜ ಮಠದ ಮುಖ್ಯಸ್ಥರು ಶ್ರೀ ಶ್ರೀ ವಿಶ್ವೇಶ ತೀರ್ಥ ಶ್ರೀಪಾದಂಗಳವರು ಇಹಲೋಕ ಯಾತ್ರೆ ಮುಗಿಸಿ ಶ್ರೀಮನ್ನಾರಾಯಣನ ನೆಲೆ ವೈಕುಂಟಕ್ಕೆ ಹೊರಟಿದ್ದಾರೆ.
— C T Ravi
ಗುರುಗಳ ಅಗಲಿಕೆಯಲ್ಲಿ ನಾವು ಅನಾಥರಾಗಿದ್ದೇವೆ. ಮುಂದೆ ಬೃಂದಾವನಸ್ಥರಾಗಿ ನಮ್ಮನ್ನೆಲ್ಲ ಆಶೀರ್ವದಿಸುತ್ತಾರೆ ಎಂದು ನಂಬಿದ್ದೇನೆ.
ಹರಿಃ ಓಂ pic.twitter.com/EqKBHcCczY