ಪೇಜಾವರ ತೀರ್ಥ ಸ್ವಾಮೀಜಿ 
ರಾಜ್ಯ

ಪೇಜಾವರ ಶ್ರೀ ನಿಧನ: ರಾಜ್ಯಾದ್ಯಂತ 3 ದಿನ ಶೋಕಾಚರಣೆ; ಬೆಂಗಳೂರಿನಲ್ಲಿ ಅಂತ್ಯಕ್ರಿಯೆ

ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಪೇಜಾವರ ಮಠದ ಹಿರಿಯ ಯತಿಗಳಾದ ವಿಶ್ವೇಶತೀರ್ಥ ಸ್ವಾಮೀಜಿ ಅವರ ನಿಧನ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮೂರು ದಿನಗಳ ಶೋಕಾಚರಣೆ ಘೋಷಿಸಲಾಗಿದೆ.

ಬೆಂಗಳೂರು: ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಪೇಜಾವರ ಮಠದ ಹಿರಿಯ ಯತಿಗಳಾದ ವಿಶ್ವೇಶತೀರ್ಥ ಸ್ವಾಮೀಜಿ ಅವರ ನಿಧನ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮೂರು ದಿನಗಳ ಶೋಕಾಚರಣೆ ಘೋಷಿಸಲಾಗಿದೆ.

ಮಣಿಪಾಲದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ ಅವರು, ಬೆಂಗಳೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ಮಾಡಲಾಗುವುದು ಎಂದರು.

ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸ್ವಾಮೀಜಿ ಆಶಯದಂತೆ ಬೆಂಗಳೂರಿನ ವಿದ್ಯಾಪೀಠದಲ್ಲಿ ಬೃಂದಾವನ ನಿರ್ಮಿಸಲಾಗುವುದು. ನಂತರ ಸೇನಾ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಕರೆತರಲಾಗುವುದು, ನಂತರ ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ತಮ್ಮ ಮತ್ತು ಸ್ವಾಮೀಜಿ ಒಡನಾಟ ನೆನಪಿಸಿಕೊಂಡು ಭಾವುಕರಾದ ಯಡಿಯೂರಪ್ಪ, ‘ನಾನು ಸ್ವಾಮೀಜಿ ಜೊತೆಗೆ ಕಳೆದ 50 ವರ್ಷಗಳಿಂದ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದೆ. ಅವರು ಅಯೋಧ್ಯೆಯಲ್ಲಿ ರಾಮನ ವಿಗ್ರಹ ಪ್ರತಿಷ್ಠಾಪನೆಗೆ ಹೋದಾಗ ಅವರ ಜೊತೆಗೆ ನಾನೂ ಇದ್ದೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗಬೇಕು ಎಂಬ ಕನಸು ಅವರದ್ದಾಗಿತ್ತು. ಈಗ ಸುಪ್ರೀಂ ಕೋರ್ಟ್‌ ಸಹ ಅದೇ ತೀರ್ಪು ನೀಡಿದೆ. ಆದರೆ ರಾಮಮಂದಿರ ನೋಡಲು ಅವರಿಗೆ ಆಗಲಿಲ್ಲ’ ಎಂದು ಹೇಳಿದರು.

‘ನಮ್ಮ ದೇಶದ ಇತಿಹಾಸದಲ್ಲಿ ಯಾವುದೇ ಸ್ವಾಮೀಜಿ ಹೀಗೆ ದೇಶದ ಉದ್ದಗಲಕ್ಕೆ ಪ್ರವಾಸ ಮಾಡಿದ್ದು ನಾನು ನೋಡಿಲ್ಲ. ಆಸ್ಪತ್ರೆ ಸೇರುವ ಎರಡು ದಿನ ಹಿಂದೆಯೂ ಪ್ರವಾಸ ಮಾಡಿದ್ದರು. ಇಂಥ ಅಪರೂಪದ ಯತಿವರೇಣ್ಯ ಸಿಗುವುದು ಕಷ್ಟ. ಅಂಥ ಮಹಾನ್ ಪೂಜ್ಯರನ್ನು ಕಳೆದುಕೊಂಡು ದೇಶ ಬಡವಾಗಿದೆ’ ಎಂದು ವಿಷಾದಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT