ಪೇಜಾವರ ಶ್ರೀಗಳಿಗೆ ಸಕಲ ಸರ್ಕಾರಿ ಗೌರವ 
ರಾಜ್ಯ

ವಿದ್ಯಾಪೀಠದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ವಿಶ್ವೇಶ ತೀರ್ಥ ಶ್ರೀ ಬೃಂದಾವನ

ಕೃಷ್ಣೈಕ್ಯರಾಗಿರುವ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ ಅವರ ಪಾರ್ಥೀವ ಶರೀರದ ಬೃಂದಾವನ ಸಕಲ ಸರ್ಕಾರಿ ಗೌರವ ಹಾಗೂ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿದ್ಯಾಪೀಠದಲ್ಲಿ ಇಂದು ನೆರವೇರಿತು. 

ಬೆಂಗಳೂರು: ಕೃಷ್ಣೈಕ್ಯರಾಗಿರುವ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ ಅವರ ಪಾರ್ಥೀವ ಶರೀರದ ಬೃಂದಾವನ ಸಕಲ ಸರ್ಕಾರಿ ಗೌರವ ಹಾಗೂ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿದ್ಯಾಪೀಠದಲ್ಲಿ ಇಂದು ನೆರವೇರಿತು. 

ಉಡುಪಿಯಿಂದ ವಿಶೇಷ ವಿಮಾನದ ಮೂಲಕ ಬಂದ ಪಾರ್ಥೀವ ಶರೀರವನ್ನು ಬೆಂಗಳೂರಿನ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿತ್ತು. ನಂತರ ಸಂಜೆ 6-20ಕ್ಕೆ ನಗರದ ವಿದ್ಯಾಪೀಠಕ್ಕೆ ಅಂತ್ಯಸಂಸ್ಕಾರಕ್ಕಾಗಿ ತರಲಾಯಿತು. 

 ಬಳಿಕ ವಿದ್ಯಾಪೀಠ ಆವರಣದಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವರುಗಳಾದ ಕೆ.ಎಸ್. ಈಶ್ವರಪ್ಪ, ಆರ್. ಅಶೋಕ, ಬಸವರಾಜ್ ಬೊಮ್ಮಾಯಿ, ಸಂಸದರಾದ ಶೋಭಾ ಕರಂದ್ಲಾಜೆ, ತೇಜಸ್ವಿ ಸೂರ್ಯ ,ಕೇಂದ್ರದ ಮಾಜಿ ಸಚಿವೆ ಉಮಾಭಾರತಿ, ಸಿರಿಗೆರೆ ಮಠದ ಶ್ರೀ ಸೇರಿದಂತೆ ಅನೇಕರು ಅಂತಿಮ ನಮನ ಸಲ್ಲಿಸಿದರು. 

ವಿಶ್ವೇಶ ತೀರ್ಥರ ಆಪ್ತ ಶಿಷ್ಯ ಮತ್ತು ವಿದ್ಯಾಪೀಠದ ಪ್ರಾಚಾರ್ಯ ಕೃಷ್ಣರಾಜ ಕುತ್ವಾಡಿ  ಅವರ ಮಾರ್ಗದರ್ಶನದಲ್ಲಿ  ಧಾರ್ಮಿಕ ವಿಧಿಗಳೊಂದಿಗೆ ಶ್ರೀಗಳ ಪಾರ್ಥೀವ ಶರೀರವನ್ನು ಬೃಂದಾವನದೊಳಗೆ ಕುಳಿರಿಸಲಾಯಿತು. 

ಬೃಂದಾವನ ವೇಳೆ ಶ್ರೀಗಳನ್ನು ಪದ್ಮಾಸನದಲ್ಲಿ ಕೂರಿಸಲಾಯಿತು. ಜಪ ಮಾಡುವ ಭಂಗಿಯಲ್ಲಿ ಗುಂಡಿಯಲ್ಲಿ  ಕುಳಿರಿಸಿ ನಿತ್ಯ ಪೂಜೆಗೆ ಬಳಸುವ ಗಿಂಡಿ, ತುಳಸಿ ಮತ್ತಿತರ ಪೂಜಾ ಸಾಮಾಗ್ರಿ ಇಟ್ಟು ಅಂತಿಮ ವಿಧಾನ ವಿಧಿ ವಿಧಾನಗಳ ಪೂಜೆ ನೆರವೇರಿಸಲಾಯಿತು. ನಂತರ ಬ್ರಹ್ಮ ರಂದ್ರಗಳಲ್ಲಿ ತೆಂಗಿನ ಕಾಯಿ ಇಟ್ಟು, ಸಾಸಿವೆ, ಉಪ್ಪು, ಹತ್ತಿಯಲ್ಲಿ  ಬೃಂದಾವನ ಮುಚ್ಚಲಾಯಿತು. ಬಳಿಕ ಪೂರ್ತಿ ಗುಂಡಿಯನ್ನು ಮಣ್ಣಿನಿಂದ ಮುಚ್ಚಲಾಯಿತು. 

ಈ ಮಧ್ಯೆ ವಿದ್ಯಾಪೀಠದ ಹೊರಭಾಗದಲ್ಲಿ ಪಾಸ್ ಗಾಗಿ ಒಂದಿಷ್ಟು ನೂಕು ನುಗ್ಗಲು ಉಂಟಾಯಿತು. ವಿದ್ಯಾಪೀಠ ಸುತ್ತಮುತ್ತ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT