ವಿಶ್ವ ವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರು (ಸಂಗ್ರಹ ಚಿತ್ರ) 
ರಾಜ್ಯ

ಹೊಸ ವರ್ಷಾಚರಣೆ ವೇಳೆ ತುಂಡುಡುಗೆ, ಗುಂಡು ಹಾಕಿದ್ರೆ ಹುಷಾರ್; ಪೊಲೀಸರ ಖಡಕ್ ವಾರ್ನಿಂಗ್!

ವಿದೇಶಿಗರ ಪಾಲಿಗೆ ಅದೊಂದು ಸ್ಥಳ ಸ್ವರ್ಗ ಅಂತಾನೇ ಫೇಮಸ್ ಆಗಿದೆ. ಈ ಕಾರಣಕ್ಕಾಗಿಯೇ ಸಾವಿರಾರು ವಿದೇಶಿಗರು, ಆ ಸ್ಥಳದಲ್ಲಿ ತಿಂಗಳುಗಟ್ಟಲೆ ಇದ್ದು, ಭಾರತೀಯ ಸಂಸ್ಕೃತಿಯನ್ನು ಕಣ್ಣುತುಂಬಿಕೊಳ್ತಾರೆ.

ಕೊಪ್ಪಳ: ವಿದೇಶಿಗರ ಪಾಲಿಗೆ ಅದೊಂದು ಸ್ಥಳ ಸ್ವರ್ಗ ಅಂತಾನೇ ಫೇಮಸ್ ಆಗಿದೆ. ಈ ಕಾರಣಕ್ಕಾಗಿಯೇ ಸಾವಿರಾರು ವಿದೇಶಿಗರು, ಆ ಸ್ಥಳದಲ್ಲಿ ತಿಂಗಳುಗಟ್ಟಲೆ ಇದ್ದು, ಭಾರತೀಯ ಸಂಸ್ಕೃತಿಯನ್ನು ಕಣ್ಣುತುಂಬಿಕೊಳ್ತಾರೆ.. 

ಇನ್ನೂ ವಿದೇಶಿಗರಿಗಂತಾನೇ ಆ ಪ್ರದೇಶದಲ್ಲಿ ಸಾಕಷ್ಟು ರೇಸಾರ್ಟಗಳು ತಲೆ ಎತ್ತಿವೆ. ನ್ಯೂ ಇಯರ್ ಸಂದರ್ಭದಲ್ಲಿ, ವಿದೇಶಿಗರ ಹಾಗೂ ರೇಸಾರ್ಟ ಮಾಲಿಕರ ಹುಚ್ಚಾಟ ಹೆಚ್ಚಾಗಿರುತ್ತೆ. ಇದಕ್ಕಾಗಿಯೇ ಆ ಜಿಲ್ಲೆಯ ಪೊಲೀಸರು,  ರೇಸಾರ್ಟ್ ಮಾಲಿಕರ ಹುಚ್ಚಾಟಕ್ಕೆ ಬ್ರೇಕ್ ನೀಡಿದ್ದು, ಖಡಕ್ ವಾರ್ನಿಂಗ್ ನೀಡಿದ್ದಾರೆ.

ಹೌದು.. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ವಿರುಪಾಪುರಗಡ್ಡಿ ವಿದೇಶಿಗರ ಪಾಲಿಗೆ ಸ್ವರ್ಗ ಅಂತಾನೇ ಫೇಮಸ್.. ಬಹುತೇಕವಾಗಿ ಈ ಪ್ರದೇಶದಲ್ಲಿ ಇತಿಹಾಸ ಪ್ರಸಿದ್ದ ಹಂಪಿ, ಕೊಪ್ಪಳ ಜಿಲ್ಲೆಯ ಆಂಜನಾದ್ರಿ ಪರ್ವತ, ಋಷಿಮುಖ ಪರ್ವತ, ಆನೆಗೊಂದಿ ಸೇರಿದಂತೆ ತುಂಗಾಭದ್ರ ನದಿಯೂ ಇಲ್ಲಿ ಹರಿಯುತ್ತೆ.. ಇನ್ನೂ ವಿಶೇಷವೆಂದ್ರೆ, ವಿದೇಶಿಗರಿಗೆ ಹೇಳಿಮಾಡಿದ ನೈಸರ್ಗಿಕ ಸ್ಥಳಗಳು ಇಲ್ಲೇ ಇದ್ದು, ಸಾವಿರಾರು ವಿದೇಶಿಗರು ವಿರುಪಾಪುರ ಗಡ್ಡಿಯಲ್ಲಿ ತಿಂಗಳುಗಟ್ಟಲೆ ಇಲ್ಲೇ ವಾಸ್ತವ್ಯ ಮಾಡ್ತಾರೆ.. ಇದನ್ನೆ ಬಂಡವಾಳ ಮಾಡಿಕೊಂಡ ರೆಸಾರ್ಟ್ ಮಾಲಿಕರು ಇದೇ ಸ್ಥಳದಲ್ಲಿ ಹತ್ತಾರು ರೇಸಾರ್ಟಗಳನ್ನು ಓಪನ್ ಮಾಡಿದ್ದಾರೆ. 

ಇದು ಅಲ್ಲದೇ ಹೊಸ ವರ್ಷದ ಸಂದರ್ಭದಲ್ಲಿ ಮಧ್ಯರಾತ್ರಿ ವಿದೇಶಿಗರನ್ನು ಸಂತೃಪ್ತಿ ಪಡಿಸಲು ಹೆಚ್ಚಿನ ಹಣ ಪಡೆದು ಮಾದಕ ವಸ್ತುಗಳನ್ನು ಮಾರಾಟ ಮಾಡುವುದು ಹಾಗೂ ಅರೆಬೆತ್ತಲೆ ನೃತ್ಯವನ್ನು ಏರ್ಪಡಿಸ್ತಾರೆ ಅನ್ನೋ ಆರೋಪ ಕೇಳಿ ಬಂದಿತ್ತು. ಇದ್ರಿಂದ ಇದೀಗ ಕೊಪ್ಪಳ ಜಿಲ್ಲೆಯ ಗಂಗಾವತಿಯ ಪೊಲೀಸರು ಎಚ್ಚೆತ್ತುಕೊಂಡಿದ್ದು ಸಿಪಿಐ ಸುರೇಶ್ ತಳವಾರ, ರೇಸಾರ್ಟ್ ಮಾಲಿಕರಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ. ಇನ್ನೂ ಕೆಲವೊಂದು ರೆಸಾರ್ಟ್ಗಳಲ್ಲಿ ಮದ್ಯ ಮಾರಾಟ ಮಾಡಲಾಗುತ್ತಿದೆಯಂತೆ.. ವಿದೇಶಿಗರ ಹತ್ತಿರ ದುಪ್ಪಟ್ಟು ಹಣ ಪಡೆದು ರೆಸಾರ್ಟ್ ಮಾಲಿಕರು ಮಾದಕ ವಸ್ತುಗಳನ್ನು ಪೂರೈಕೆ ಮಾಡ್ತಾ ಇದ್ದಾರೆ ಅನ್ನೋ ಆರೋಪ ಕೇಳಿಬಂದಿದೆ.. ಇದ್ರಿಂದ ಗರಂ ಆಗಿರೋ ಕೊಪ್ಪಳದ ಗಂಗಾವತಿ ಉಪವಿಭಾಗದ ಪೊಲೀಸರು ರೆಸಾರ್ಟ್ರ ಮಾಲಕರ ಸಭೆ ಕರೆದು ಸರಿಯಾಗಿಯೇ ತರಾಟೆಗೆ ತೆಗೆದುಕೊಂಡಿದ್ದಾರೆ. 

ಒಂದು ವೇಳೆ ಭಾರತೀಯ ಸಂಸ್ಕೃತಿಗೆ ದಕ್ಕೆ ಹಾಗೋ ರೀತಿ ಹೊಸವರ್ಷ ಆಚರಣೆ ಮಾಡಿದ್ರೆ, ಮುಲಾಜಿಲ್ಲದೇ ಕೇಸ್ ಹಾಕ್ತೀವಿ ಎಂದು ಗಂಗಾವತಿ ಡಿವೈಎಸ್‌ಪಿಬಿ.ಪಿ ಚಂದ್ರಶೇಖರ್, ರೇಸಾರ್ಟ್ ಮಾಲಕರಿಗೆ ಎಚ್ಚರಿಕೆ ನೀಡಿದ್ದಾರೆ.
ವಿರುಪಾಪುರಗಡ್ಡಿ ಮಿನಿ ಗೋವಾ ಅಂತಾನೇ ಫೇಮಸ್ ಆಗಿದ್ದು, ರೆಸಾರ್ಟ್ ಮಾಲಿಕರ ಹುಚ್ಚಾಟ ಜಾಸ್ತಿ ಆಗಿತ್ತು.. ಇದೀಗ ಪೊಲೀಸರು ಎಚ್ಚೆತ್ತುಕೊಂಡು ಸರಿಯಾಗಿಯೇ ಚಾಟಿ ಬೀಸಿದ್ದಾರೆ.. ಈಗಲಾದ್ರೂ ಹೊಸ ವರ್ಷದಂದು ರೆಸಾರ್ಟನವರು ಹುಚ್ಚಾಟ ಪ್ರದರ್ಶಿಸದೇ ಭಾರತೀಯ ಸಂಸ್ಕೃತಿ ಉಳಿಸಬೇಕಾಗಿದೆ.

-ಬಸವರಾಜ ಕರುಗಲ್
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT