ಜಿಲ್ಲಾಧಿಕಾರಿ ಜಗದೀಶ್ 
ರಾಜ್ಯ

ಮಂಗಳೂರು ಗೋಲಿಬಾರ್ ಘಟನೆ: ಮ್ಯಾಜಿಸ್ಟೇಟ್ ತನಿಖೆ ಆರಂಭ

ಇಬ್ಬರನ್ನು ಬಲಿ ಪಡೆದ ಮಂಗಳೂರು ಗೋಲಿಬಾರ್, ಹಿಂಸಾಚಾರ ಘಟನೆಗೆ ಸಂಬಂಧಿಸಿದಂತೆ ಸೋಮವಾರ  ಮ್ಯಾಜಿಸ್ಟೇಟ್ ತನಿಖೆ ಆರಂಭವಾಗಿದೆ.

ಮಂಗಳೂರು: ಇಬ್ಬರನ್ನು ಬಲಿ ಪಡೆದ ಮಂಗಳೂರು ಗೋಲಿಬಾರ್, ಹಿಂಸಾಚಾರ ಘಟನೆಗೆ ಸಂಬಂಧಿಸಿದಂತೆ ಸೋಮವಾರ  ಮ್ಯಾಜಿಸ್ಟೇಟ್ ತನಿಖೆ ಆರಂಭವಾಗಿದೆ.

ಮಂಗಳೂರು ಹಿಂಸಾಚಾರದ ತನಿಖೆಯನ್ನು ರಾಜ್ಯ ಸರಕಾರ ಮ್ಯಾಜಿಸ್ಟೇಟ್ ತನಿಖೆಗೆ ನೀಡಿದ್ದು, ಉಡುಪಿ ಜಿಲ್ಲಾಧಿಕಾರಿ ಜಗದೀಶ್ ನೇತೃತ್ವದಲ್ಲಿ ತನಿಖೆಗೆ ಆದೇಶಿಸಿದೆ. ಅಲ್ಲದೆ ಮೂರು ತಿಂಗಳಲ್ಲಿ ವಿಚಾರಣೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.

ಅದರಂತೆ ಇಂದು ಮಂಗಳೂರಿಗೆ ಆಗಮಿಸಿದ ಜಿಲ್ಲಾಧಿಕಾರಿ ಜಗದೀಶ್ ಅವರು ತನಿಖೆ ಕೈಗೆತ್ತಿಕೊಂಡಿದ್ದಾರೆ.

ಮಂಗಳೂರು ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿದ ಜಗದೀಶ್ ಅವರು, ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರೊಂದಿಗೆ ಸಮಾಲೋಚಿಸಿದರು. ಬಳಿಕ ಸ್ಟೇಟ್ ಬ್ಯಾಂಕ್ ಸರ್ಕಲ್, ಸಿಟಿ ಬಸ್ ನಿಲ್ದಾಣ, ನೆಲ್ಲಿಕಾಯಿ ರಸ್ತೆಗೆ ಭೇಟಿ ನೀಡಿ ಪರಿಶೀಲಿಸಿದರು.

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಮಂಗಳೂರಿನಲ್ಲಿ ನಡೆದಿದ್ದ ಪ್ರತಿಭಟನೆ ವೇಳೆ ಪೊಲೀಸರು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT