ಬೆಂಗಳೂರು: ಸ್ನೇಹಿತನನ್ನು ಕೊಂದ 11 ಜನರ ಬಂಧನ 
ರಾಜ್ಯ

ಬೆಂಗಳೂರು: ಸ್ನೇಹಿತನನ್ನು ಕೊಂದ 11 ಜನರ ಬಂಧನ

ಹಣಕಾಸಿನ ವಿಚಾರಕ್ಕೆ ಸ್ನೇಹಿತನನ್ನೇ ಕೊಲೆ ಮಾಡಿದ 11ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಹಣಕಾಸಿನ ವಿಚಾರಕ್ಕೆ ಸ್ನೇಹಿತನನ್ನೇ ಕೊಲೆ ಮಾಡಿದ 11ಜನರನ್ನು ಪೊಲೀಸರು ಬಂಧಿಸಿದ್ದಾರೆ.

ತಿಲಕ್ (19), ಮಂಜುನಾಥ್ (23), ರೋಷನ್ (19), ಮಹೇಂದ್ರ (18), ಸಂಜಯ್ (19) ಸೇರಿ ಒಟ್ಟು 11 ಮಂದಿ ಬಂಧಿತ ಆರೋಪಿಗಳು.

ಇದೇ 26 ರಂದು ರಾತ್ರಿ 9.15ರ ಸುಮಾರಿಗೆ 25 ವರ್ಷದ ಮಂಜುನಾಥ್ ಎಂಬಾತನನ್ನು ಶ್ರೀರಾಮಪುರದ ಎಲ್ ಎನ್ ಪುರ ಬಸ್ಸು ನಿಲ್ದಾಣದ ಹತ್ತಿರ 7-8 ಜನರ ತಂಡ ಮಾರಾಕಾಸ್ತ್ರಗಳಿಂದ ಕೊಲೆ ಮಾಡಿತ್ತು. 

ಮೃತ ಮಂಜುನಾಥ್ ,  ಆರೋಪಿ ತಿಲಕ್ ನ ಬೈಕ್ ಕಸಿದುಕೊಂಡು 20 ಸಾವಿರ ರೂ ನೀಡಬೇಕೆಂದು ಬೆದರಿಕೆಯೊಡ್ಡಿದ್ದ. ಈ  ವಿಷಯವನ್ನು ನಂತರ ತಿಲಕ್, ತನ್ನ ಸ್ನೇಹಿತರ ಬಳಿ ಹೇಳಿಕೊಂಡಿದ್ದನು. ಹಣದ ವಿಚಾರವಾಗಿ  ಸ್ನೇಹಿತರೆಲ್ಲರೂ ಮಂಜುನಾಥ್ ನನ್ನು ಕೊಲೆ ಮಾಡಲು ಸಂಚು ರೂಪಿಸಿದ್ದರು ಎಂದು ಆರೋಪಿಗಳು  ವಿಚಾರಣೆ ವೇಳೆ ಹೇಳಿಕೆ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT