ಸಾಂದರ್ಭಿಕ ಚಿತ್ರ 
ರಾಜ್ಯ

ಮಂಗಳೂರು: ಸಾಮಾಜಿಕ ಮಾಧ್ಯಮದಲ್ಲಿ ಕೋಮು ದ್ವೇಷ ಹರಡುತ್ತಿದ್ದ ವ್ಯಕ್ತಿ ಬಂಧನ

ಸಾಮಾಜಿಕ ಮಾಧ್ಯಮದಲ್ಲಿ ಕೋಮು ದ್ವೇಷದ ಪ್ರಚೋದನಾತ್ಮಕ ಸಂದೇಶಗಳನ್ನು ಹರಡುತ್ತಿದ್ದ 25 ವರ್ಷದ ವ್ಯಕ್ತಿಯೊಬ್ಬನ್ನು ಪೊಲೀಸರು ಸೋಮವಾರ ಸಂಜೆ ಬಂಧಿಸಿದ್ದಾರೆ. 

ಮಂಗಳೂರು: ಸಾಮಾಜಿಕ ಮಾಧ್ಯಮದಲ್ಲಿ ಕೋಮು ದ್ವೇಷದ ಪ್ರಚೋದನಾತ್ಮಕ ಸಂದೇಶಗಳನ್ನು ಹರಡುತ್ತಿದ್ದ 25 ವರ್ಷದ ವ್ಯಕ್ತಿಯೊಬ್ಬನ್ನು ಪೊಲೀಸರು ಸೋಮವಾರ ಸಂಜೆ ಬಂಧಿಸಿದ್ದಾರೆ. 

ಬಂಧಿತ ವ್ಯಕ್ತಿಯನ್ನು ನಗರದ ಪಾಂಡೇಶ್ವರದ ಮೊಯಿದೀನ್ ಅಹಮದ್ ಎಂದು ಗುರುತಿಸಲಾಗಿದೆ. ಡಿ 19ರಂದು ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆಗಳ ವೇಳೆ ನಡೆದ ಹಿಂಸಾಚಾರಗಳಿಗೆ ಸಂಬಂಧಿಸಿ ಪ್ರಚೋದನಾತ್ಮಕ ಸಂದೇಶಗಳನ್ನು ಕಳುಹಿಸುತ್ತಿದ್ದ  ವ್ಯಕ್ತಿಯನ್ನು ಬಂಧಿಸಲಾಗಿದೆ . 

ಅಹಮದ್  ಬಂಧನ ಕುರಿತು ಮತ್ತು ಪ್ರಚೋನಾತ್ಮಕ ಸಂದೇಶಗಳನ್ನು ಫಾವರ್ಡ್ ಮಾಡುತ್ತಿದ್ದ ಅನೇಕ ವ್ಯಕ್ತಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. 

ಈ ಕುರಿತಂತೆ ನಗರದ ಸೈಬರ್ ಅಪರಾಧ ತಡೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅತ್ಯುತ್ತಮವೆನಿಸಿದ ಸೈಬರ್ ತಜ್ಞರು ಸಾಮಾಜಿಕ ಮಾಧ್ಯಮ ಗ್ರೂಪ್ ಗಳ ಮೇಲ್ವಿಚಾರಣೆ ನಡೆಸುತ್ತಿದ್ದು, ನಗರ ಮತ್ತು ಸುತ್ತಲಿನ ಪ್ರದೇಶದಲ್ಲಿ ಶಾಂತಿ ಮತ್ತು ಸಾಮರಸ್ಯ ಕದಡಲು ಯಾರೊಬ್ಬರು ಪ್ರಯತ್ನಿಸಿದರೂ ಕ್ರಮ ತೆಗೆದುಕೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತರಾದ ಡಾ. ಪಿ.ಎಸ್.ಹರ್ಷ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಕೋಮುದ್ವೇಷ ಹಬ್ಬುತ್ತಿದ್ದ ದುಷ್ಕರ್ಮಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.  

ಪ್ರಚೋದನಾತ್ಮಕ ಸಂದೇಶಗಳನ್ನು ಫಾರ್ವರ್ಡ್ ಮಾಡುತ್ತಿದ್ದ ಫೇಸ್‍ಬುಕ್ ಅಡ್ಮಿನ್ ಸೇರಿದಂತೆ ಆರು ಜನರಿಗೆ ಸೈಬರ್ ಅಪರಾಧ ನಿಗ್ರಹ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪರಿಷತ್ ಸಭಾಪತಿ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಕೌಂಟರ್; ನಾಮಪತ್ರ ಸಲ್ಲಿಸಿದ BJP ಅಭ್ಯರ್ಥಿ; ಸ್ಪೀಕರ್ ಚುನಾವಣೆ ಬಹಿಷ್ಕಾರ

ಕರ್ನಾಟಕ ಪುರುಷರ ಕ್ರಿಕೆಟ್ ತಂಡಕ್ಕೆ ಮುಖ್ಯ ಕೋಚ್ ಆಗಿ ವಿನಯ್ ಕುಮಾರ್ ನೇಮಕ

ಬಿಜೆಪಿ-ಆರ್‌ಎಸ್‌ಎಸ್ 'ಜೋಕರ್ ಗಳ ಗುಂಪು' ಎಂದ ರಾಹುಲ್ ಗಾಂಧಿ! ವಿಶ್ವ ನಾಯಕರನ್ನು 'ಅಪ್ಪಿಕೊಳ್ಳುವ' ಪ್ರಧಾನಿ ಮೋದಿಯ ವಿದೇಶಾಂಗ ನೀತಿಯ ಲೇವಡಿ

ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ; ಸರ್ಕಾರಿ ಗೌರವ ಸಮರ್ಥಿಸಿಕೊಂಡ CM; ಡಿಕೆಶಿ ಹೇಳಿದ್ದೇನು? Video

ಜಂತರ್ ಮಂತರ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದವರು Gen Zಗಳೇ ಅಲ್ಲ; 'ಶಬಾನಾ ಅಜ್ಮಿಯಂತವರೇ' ಹೆಚ್ಚು: ಕಂಗನಾ