ಮೇಲುಕೋಟೆಯ ಪಂಚಕಲ್ಯಾಣಿ ಜೀರ್ಣೋದ್ಧಾರಕ್ಕೆ ಇನ್ಫೋಸಿಸ್ ಫೌಂಡೇಶನ್ ನೆರವು 
ರಾಜ್ಯ

ಮೇಲುಕೋಟೆಯ ಪಂಚಕಲ್ಯಾಣಿ ಜೀರ್ಣೋದ್ಧಾರಕ್ಕೆ ಇನ್ಫೋಸಿಸ್ ಫೌಂಡೇಶನ್ ನೆರವು

ಮಂಡ್ಯ ಜಿಲ್ಲೆ ಮೇಲುಕೋಟೆಯಲ್ಲಿರುವ ಪುರಾತನ ಕೊಳ ಪಂಚ ಕಲ್ಯಾಣಿ ಪುನರ್ನಿರ್ಮಾಣ ಯೋಜನೆಗೆ ಗುರುವಾರ ಚಾಲನೆ ಸಿಕ್ಕಿದೆ.

ಬೆಂಗಳೂರು: ಮಂಡ್ಯ ಜಿಲ್ಲೆ ಮೇಲುಕೋಟೆಯಲ್ಲಿರುವ ಪುರಾತನ ಕೊಳ ಪಂಚ ಕಲ್ಯಾಣಿ ಪುನರ್ನಿರ್ಮಾಣ ಯೋಜನೆಗೆ ಗುರುವಾರ ಚಾಲನೆ ಸಿಕ್ಕಿದೆ.. ಇನ್ಫೋಸಿಸ್ ಫೌಂಡೇಶನ್, ಈ ಕೊಳದ  ಸಂರಕ್ಷಣೆ ಜೀರ್ಣೋದ್ದಾರ ಕಾರ್ಯಕ್ಕೆ ನೆರವು ನೀಡಲಿದೆ.
ಈ ಕೆರೆಯನ್ನು ಸ್ವಚ್ಚಗೊಳಿಸಿಇದರ ಜೀರ್ಣೋದ್ದಾರ ಮಾಡುವುದರೊಡನೆ ಇದರಲ್ಲಿ ತ್ಯಾಜ್ಯ, ಅನುಪಯುಕ್ತ ಸಂಗ್ರಹಗಳನ್ನು ತೆಗೆದು ಹಾಕಲಾಗುವುದು. ಆದರೆ ಕೆರೆಯ ರಚನೆಗೆ ಹ್ಯಾವುದೇ ಹಾನಿಯಾಗದಂತೆ ಈ ಕಾರ್ಯ ನಡೆಯಲಿದೆ. ಇದರ ಸಮೀಪದಲ್ಲಿರುವ ಗಣೇಶನ ಹೊಂಡದಿಂದ ಈ ಕೊಳಕ್ಕೆ ಸಂಪರ್ಕಿಸುವ ಕಾಲುವೆ ಮರುಸ್ಥಾಪನೆ ಮಾಡಲಾಗುವುದು. ಜತೆಗೆ ಎಲ್ಲಾ ಕೊಳಗಳನ್ನು ಸೇರಿಸಿ ಸುತ್ತಲೂ ಗೋಡೆಯನ್ನು ನಿರ್ಮಾಣ ಂಆಡಲಾಗುತ್ತದೆ. 
ಫೌಂಡೇಷನ್ ಅಧ್ಯಕ್ಷೆ ಸುಧಾಮೂರ್ತಿ ಮಾತನಾಡಿ "ಹೊಯ್ಸಳ, ವಿಜಯನಗರ, ಮೈಸೂರು ಒಡೆಯರ ಕಾಲದ ವಾಸ್ತುಶಿಲ್ಪ ನಿರ್ಮಾಣಗಳು ಮೇಲುಕೋಟೆಯಲ್ಲಿದೆ. ನಮ್ಮ ಪೂರ್ವಜರು ವೈಭವದ ಸಾಕ್ಷಿಯಾಗಿರುವ ಹಲವಾರು ಪರಂಪರಿಕ ರಚನೆಗಳನ್ನು ಅವರು ರಚಿಸಿದ್ದರು. ನಾವು ಅವುಗಳನ್ನು ಕಾಪಾಡಿಕೊಳ್ಳಬೇಕಾಗಿದೆ. ಅದು ನಮ್ಮ ಕರ್ತವ್ಯವೂ ಆಗಿದೆ.ಕೊಳದ ನೀರಿನ ಗುಣಮಟ್ಟ ಸುಧಾರಣೆ, ಮೇಲುಕೋಟೆಯ ನೈಸರ್ಗಿಕ ಪರಿಸರದ ಸಮತೋಲನ ಮರಳಿಸುವುದಕ್ಕೆ ಈ ಕೊಳದ ಪುನರುತ್ಥಾನ ಅಗತ್ಯವಾಗಿದೆ. ಇದೇ ಅಲ್ಲದೆ ಭವಿಷ್ಯದ ಪೀಳಿಗೆಗೆ ನಮ್ಮ ಈ ಶ್ರೀಮಂತ ಆಸ್ತಿಯನ್ನು ಉಳಿಸುವುದು ಸಹ ಮುಖ್ಯ.
ಈ ಸಂದರ್ಭದಲ್ಲಿ ಮಾತನಾಡಿದ ಪ್ರವಾಸೋದ್ಯಮ ಸಚಿವ ಸಾ.ರಾ ಮಹೇಶ್ "ಇಲ್ಲಿನ ಕೊಳಗಳು ದೇವಾಲಯ ಸಂಕೀರ್ಣದ ಅಂದ ಹೆಚ್ಚಿಸುವುದರೊಡನೆ ನೀರಿನ ಪ್ರಮುಖ ಮೂಲಗಳೂ ಆಗಿದೆ" ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ಭೀಕರ ಪ್ರವಾಹದ ಬಳಿಕ ನೇಪಾಳಕ್ಕೆ ಮತ್ತೊಂದು ಅಪಾಯ! 2 ಸರೋವರಗಳಲ್ಲಿ ಅಪಾರ ನೀರು!

ಪ್ರವಾಹದ ರೌದ್ರಾವತಾರ: ನೇಪಾಳದಿಂದ ಕೊಚ್ಚಿಬಂದ ಮತ್ತಷ್ಟು ಶವಗಳು, ಗಂಡಕ್ ನದಿಯಲ್ಲಿ 3, ಮಹಾರಾಜ್‌ಗಂಜ್‌ನಲ್ಲಿ 4 ಮೃತದೇಹ ಪತ್ತೆ!

ಒಂದು ಕ್ಷಣ ತಡವಾಗಿದ್ದರೂ ಅನಾಹುತ! ವೃದ್ಧ ಪ್ರಯಾಣಿಕನ ರಕ್ಷಣೆ, ‘ರಿಯಲ್ ಹೀರೋ’ ಆದ ಬಸ್ ಕ್ಲೀನರ್! Video

ಟಿ20 ವಿಶ್ವಕಪ್ ಗೆದ್ದ ನಂತರ ಎರಡೇ ತಿಂಗಳಲ್ಲಿ ತಂಡದಿಂದ ಕೈಬಿಟ್ಟಿದ್ದಕ್ಕೆ ಅರಗಿಸಿಕೊಳ್ಳಲು ಆಗಲಿಲ್ಲ: ಕೊನೆಗೂ ಮೌನ ಮುರಿದ ಸೂರ್ಯಕುಮಾರ್ ಯಾದವ್

ಬೋರ್‌ವೆಲ್ ಮೋಟಾರ್‌ ಆನ್‌ ಮಾಡುತ್ತಿದ್ದಂತೆ ನಾಡಬಾಂಬ್ ಸ್ಫೋಟ; ಮತ್ತೊಂದು ಜೀವಂತ ಬಾಂಬ್ ಪತ್ತೆ; ಬೆಚ್ಚಿಬಿದ್ದ ತುಮಕೂರು!