ಮಡಿಕೇರಿ: ಮಲ್ಲಳ್ಳಿ ಜಲಪಾತದಲ್ಲಿ ಈಜಲು ತೆರಳಿದ್ದ ಟೆಕ್ಕಿ ನೀರು ಪಾಲು! 
ರಾಜ್ಯ

ಮಡಿಕೇರಿ: ಮಲ್ಲಳ್ಳಿ ಜಲಪಾತದಲ್ಲಿ ಈಜಲು ತೆರಳಿದ್ದ ಟೆಕ್ಕಿ ನೀರು ಪಾಲು!

ಪ್ರವಾಸಕ್ಕಾಗಿ ಮಡಿಕೇರಿಯ ಸೋಮವಾರಪೇಟೆ ತಾಲೂಕಿನ ಮಲ್ಲಳ್ಳಿ ಜಲಪಾತಕ್ಕೆ ಬಂದಿದ್ದ ಬೆಂಗಳೂರಿನ ಐಟಿ ಸಂಸ್ಥೆಯೊಂದರ ಉದ್ಯೋಗಿ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಭಾನುವಾರ ವರದಿಯಾಗಿದೆ.

ಮಡಿಕೇರಿ: ಪ್ರವಾಸಕ್ಕಾಗಿ ಮಡಿಕೇರಿಯ ಸೋಮವಾರಪೇಟೆ ತಾಲೂಕಿನ ಮಲ್ಲಳ್ಳಿ ಜಲಪಾತಕ್ಕೆ ಬಂದಿದ್ದ ಬೆಂಗಳೂರಿನ ಐಟಿ ಸಂಸ್ಥೆಯೊಂದರ ಉದ್ಯೋಗಿ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಭಾನುವಾರ ವರದಿಯಾಗಿದೆ.

ಮೂಲತಃ ಮೈಸೂರಿನವರಾಗಿದ್ದು ಇದೀಗ ಬೆಂಗಳೂರಿನ ಐಟಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಸ್ಕಂದ (24) ಜಲಪಾತದಲ್ಲಿ ಮುಳುಗಿ ಅಸುನೀಗಿದ್ದಾರೆ..ಸ್ಥಳೀಯರು ಜಲಪಾತದ ನೀರಿನಲ್ಲಿದ್ದ ಯುವಕನ ಮೃತದೇಹವನ್ನು ಶೋಧಿಸಿ ಹೊರತೆಗೆದಿದ್ದಾರೆ.

ಸ್ಕಂದ ಇಂದು ಬೆಳಿಗ್ಗೆ 11 ಮಂದಿ ಸ್ನೇಹಿತರೊಡನೆ ಮಲ್ಲಳ್ಳಿ ಜಲಪಾತಕ್ಕೆ ಪ್ರವಾಸ ಬಂದಿದನು.ಈ ವೇಳೆ ಜಲಪಾತಕ್ಕಿಳಿಯುವುದು ನಿಷೇಧವಾಗಿದ್ದರೂ ಸಹ ಸ್ಕಂದ ಆಳದ ನೀರಿಗಿಳಿದು ಈಜಲು ತೊಡಗಿದ್ದಾನೆ.ಈ ಸಮಯದಲ್ಲಿ ನೀರಿನ ಸೆಳೆತಕ್ಕೆ ಸಿಕ್ಕ ಅವನು ಸ್ನೇಹಿತರ ಕಣ್ಣ ಮುಂದೆಯೇ ಕೊಚ್ಚಿ ಹೋಗಿದ್ದಾನೆ.

ಸ್ಕಂದನಿಗೆ ಸರಿಯಾಗಿ ಈಜು ರ್ಬರದಿರುವುದು ಈ ದುರಂತಕ್ಕೆ ಕಾರಣ ಎನ್ನಲಾಗಿದ್ದು ಮೃತನ ಸ್ನೇಹಿತರು ತಕ್ಷಣ ಸ್ಥಳದಲ್ಲಿದ್ದ ಪ್ರವಾಸಿ ಮಿತ್ರ ತಂಡದವರಿಗೆ ಮಾಹಿತಿ ತಿಳಿಸಿದ್ದಾರೆ. ಅವರು ನುರಿತ ಈಜುಗಾರಒಡನೆ ಸೇರಿ ಶವವನ್ನು ಹೊರತಂದಿದ್ದಾರೆ.

ಸೋಮವಾರಪೇಟೆ ಪೋಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. ಮೃತದೇಹದ ಮರಣೋತ್ತರ ಪರೀಕ್ಷೆ ಮುಗಿಸಿದ್ದು ಇದೀಗ ಪೋಷಕರಿಗೆ ಒಪ್ಪಿಸಲಾಗಿದೆ ಎಂದು ವರದಿ ತಿಳಿಸಿದೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT