ಮಡಿಕೇರಿ: ಮಲ್ಲಳ್ಳಿ ಜಲಪಾತದಲ್ಲಿ ಈಜಲು ತೆರಳಿದ್ದ ಟೆಕ್ಕಿ ನೀರು ಪಾಲು! 
ರಾಜ್ಯ

ಮಡಿಕೇರಿ: ಮಲ್ಲಳ್ಳಿ ಜಲಪಾತದಲ್ಲಿ ಈಜಲು ತೆರಳಿದ್ದ ಟೆಕ್ಕಿ ನೀರು ಪಾಲು!

ಪ್ರವಾಸಕ್ಕಾಗಿ ಮಡಿಕೇರಿಯ ಸೋಮವಾರಪೇಟೆ ತಾಲೂಕಿನ ಮಲ್ಲಳ್ಳಿ ಜಲಪಾತಕ್ಕೆ ಬಂದಿದ್ದ ಬೆಂಗಳೂರಿನ ಐಟಿ ಸಂಸ್ಥೆಯೊಂದರ ಉದ್ಯೋಗಿ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಭಾನುವಾರ ವರದಿಯಾಗಿದೆ.

ಮಡಿಕೇರಿ: ಪ್ರವಾಸಕ್ಕಾಗಿ ಮಡಿಕೇರಿಯ ಸೋಮವಾರಪೇಟೆ ತಾಲೂಕಿನ ಮಲ್ಲಳ್ಳಿ ಜಲಪಾತಕ್ಕೆ ಬಂದಿದ್ದ ಬೆಂಗಳೂರಿನ ಐಟಿ ಸಂಸ್ಥೆಯೊಂದರ ಉದ್ಯೋಗಿ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಭಾನುವಾರ ವರದಿಯಾಗಿದೆ.

ಮೂಲತಃ ಮೈಸೂರಿನವರಾಗಿದ್ದು ಇದೀಗ ಬೆಂಗಳೂರಿನ ಐಟಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಸ್ಕಂದ (24) ಜಲಪಾತದಲ್ಲಿ ಮುಳುಗಿ ಅಸುನೀಗಿದ್ದಾರೆ..ಸ್ಥಳೀಯರು ಜಲಪಾತದ ನೀರಿನಲ್ಲಿದ್ದ ಯುವಕನ ಮೃತದೇಹವನ್ನು ಶೋಧಿಸಿ ಹೊರತೆಗೆದಿದ್ದಾರೆ.

ಸ್ಕಂದ ಇಂದು ಬೆಳಿಗ್ಗೆ 11 ಮಂದಿ ಸ್ನೇಹಿತರೊಡನೆ ಮಲ್ಲಳ್ಳಿ ಜಲಪಾತಕ್ಕೆ ಪ್ರವಾಸ ಬಂದಿದನು.ಈ ವೇಳೆ ಜಲಪಾತಕ್ಕಿಳಿಯುವುದು ನಿಷೇಧವಾಗಿದ್ದರೂ ಸಹ ಸ್ಕಂದ ಆಳದ ನೀರಿಗಿಳಿದು ಈಜಲು ತೊಡಗಿದ್ದಾನೆ.ಈ ಸಮಯದಲ್ಲಿ ನೀರಿನ ಸೆಳೆತಕ್ಕೆ ಸಿಕ್ಕ ಅವನು ಸ್ನೇಹಿತರ ಕಣ್ಣ ಮುಂದೆಯೇ ಕೊಚ್ಚಿ ಹೋಗಿದ್ದಾನೆ.

ಸ್ಕಂದನಿಗೆ ಸರಿಯಾಗಿ ಈಜು ರ್ಬರದಿರುವುದು ಈ ದುರಂತಕ್ಕೆ ಕಾರಣ ಎನ್ನಲಾಗಿದ್ದು ಮೃತನ ಸ್ನೇಹಿತರು ತಕ್ಷಣ ಸ್ಥಳದಲ್ಲಿದ್ದ ಪ್ರವಾಸಿ ಮಿತ್ರ ತಂಡದವರಿಗೆ ಮಾಹಿತಿ ತಿಳಿಸಿದ್ದಾರೆ. ಅವರು ನುರಿತ ಈಜುಗಾರಒಡನೆ ಸೇರಿ ಶವವನ್ನು ಹೊರತಂದಿದ್ದಾರೆ.

ಸೋಮವಾರಪೇಟೆ ಪೋಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. ಮೃತದೇಹದ ಮರಣೋತ್ತರ ಪರೀಕ್ಷೆ ಮುಗಿಸಿದ್ದು ಇದೀಗ ಪೋಷಕರಿಗೆ ಒಪ್ಪಿಸಲಾಗಿದೆ ಎಂದು ವರದಿ ತಿಳಿಸಿದೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT