ಸಾರಿಗೆ-ಖಾಸಗಿ ಬಸ್ ಗಳ ಮುಖಾಮುಖಿ ಡಿಕ್ಕಿ: ಚಾಲಕ ಸಾವು, 23 ಮಂದಿಗೆ ಗಾಯ 
ರಾಜ್ಯ

ಸಾರಿಗೆ-ಖಾಸಗಿ ಬಸ್ ಗಳ ಮುಖಾಮುಖಿ ಡಿಕ್ಕಿ: ಚಾಲಕ ಸಾವು, 23 ಮಂದಿಗೆ ಗಾಯ

ಕರ್ನಾಟಕ ರ್ಸತೆ ಸಾರಿ ಸಂಸ್ಥೆ ಬಸ್ ಹಾಗೂ ಖಾಸಗಿ ಬಸ್ ಗಳ ನಡುವೆ ಸೋಮವಾರ ನಸುಕಿನ ಜಾವ ಡಿಕ್ಕಿ ಸಂಭವಿಸಿದ್ದು ಓರ್ವ ಬಸ್ ಚಾಲಕ ಮೃತಪಟ್ಟು 23 ಜನರಿ....

ಬಳ್ಳಾರಿ: ಕರ್ನಾಟಕ ರ್ಸತೆ ಸಾರಿ ಸಂಸ್ಥೆ ಬಸ್ ಹಾಗೂ ಖಾಸಗಿ ಬಸ್ ಗಳ ನಡುವೆ ಸೋಮವಾರ ನಸುಕಿನ ಜಾವ ಡಿಕ್ಕಿ ಸಂಭವಿಸಿದ್ದು ಓರ್ವ ಬಸ್ ಚಾಲಕ ಮೃತಪಟ್ಟು 23 ಜನರಿಗೆ ಗಾಯಗಳಾಗಿರುವ ಘಟನೆ ಬಳ್ಳಾರಿ ಜಿಲ್ಲೆ ಕೂಡ್ಲಗಿಯಲ್ಲಿ ನಡೆದಿದೆ.
ಸಾರಿಗೆ ಸಂಸ್ಥೆಯ ಐರಾವತ ಬಸ್ ಬೆಂಗಳೂರಿನಿಂದ ಜಮಖಂಡಿಗೆ ಹೊರಟಿದ್ದರೆ ಖಾಸಗಿ ಎಸ್ ಆರ್ ಎಸ್ ಸಂಸ್ಥೆಯ ಬಸ್ ವಿಜಯಪುರದಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿತ್ತು.
ಕೂಡ್ಲಗಿ ಸಮೀಪ ಅಮ್ಮನಕೆರೆ ಕ್ರಾಸ್ ನ ರಾ.ಹೆ.೫೦ರಲ್ಲಿ ಈ ಘಟನೆ ನಡೆದಿದ್ದು ಸಾರಿಗೆ ಸಂಸ್ಥೆ ಬಸ್ ಚಾಲಕ ಮಲ್ಲಿಕಾರ್ಜುನ ಸ್ಥಳದಲ್ಲೇ ಸಾವನ್ನಪಿದ್ದಾರೆ.
ಎರಡೂ ಬಸ್ ನಲ್ಲಿದ್ದ ಪ್ರಯಾಣಿಕರಲ್ಲಿ ಒಟ್ಟು 23 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಇವರನ್ನು ಕೂಡ್ಲಗಿಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಬಳ್ಳಾರಿಯ ವಿಮ್ಸ್ ಗೆ ಹೆಚ್ಚುವರಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಘಟನೆ ಕುರಿತು ಮಾಹಿತಿ ಪಡೆದ ಎಸ್.ಪಿ ಅರುಣ ರಂಗರಾಜನ್ ಭೇಟಿ ನೀಡಿದ್ದಾರೆ.ಘಟನೆಗೆ ಖಾಸಗಿ ಬಸ್ ಚಾಲಕ ಕದ್ಂ ಶಾ ಅಜಾಗರೂಕತೆಯೇ ಕಾರಣವಾಗಿದೆ ಎಂದು ಹೇಳಲಾಗಿದೆ.
ಕೂಡ್ಲಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT