ಸಂಗ್ರಹ ಚಿತ್ರ 
ರಾಜ್ಯ

ವಿದ್ಯಾರ್ಥಿಗೆ ಕರೆಂಟ್ ಶಾಕ್, 3 ಶಿಕ್ಷಕರಿಗೆ ಅಮಾನತಿನ ಶಾಕ್!

ಶಾಲಾ ವಿದ್ಯಾರ್ಥಿಯೊಬ್ಬ ಪಂಪ್ ಆಫ್ ಮಾಡುವ ವೇಳೆ ಕರೆಂಟ್ ಶಾಕ್ ಹೊಡೆದಿತ್ತು. ಈ ಸಂಬಂಧ ಶಾಲೆಯ ಮೂವರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ.

ಬಾಗಲಕೋಟೆ: ಶಾಲಾ ವಿದ್ಯಾರ್ಥಿಯೊಬ್ಬ ಪಂಪ್ ಆಫ್ ಮಾಡುವ ವೇಳೆ ಕರೆಂಟ್ ಶಾಕ್ ಹೊಡೆದಿತ್ತು. ಈ ಸಂಬಂಧ ಶಾಲೆಯ ಮೂವರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ. 
ಜನವರಿ 23ರಂದ ಈ ಪ್ರಕರಣ ನಡೆದಿದ್ದು ಶಾಲೆಯ ಶಿಕ್ಷಕರು 9 ವರ್ಷದ ವಿದ್ಯಾರ್ಥಿ ಬಸವರಾಜು ಪಿ ಎಂಬಾತನಿಗೆ ಶಾಲೆಯ ಸಮಯದಲ್ಲಿ ಶೌಚಾಲಯವನ್ನು ಶುಚಿಗೊಳಿಸುವಂತೆ ಹೇಳಿದ್ದರು. ಅಂತೆ ಬಸವರಾಜು ಪಂಪ್ ಅನ್ನು ಆಫ್ ಮಾಡುವಾಗ ಕರೆಂಟ್ ಶಾಕ್ ಹೊಡೆದಿತ್ತು. ಕೂಡಲೇ ವಿದ್ಯಾರ್ಥಿಯನ್ನು ಶಿಕ್ಷಕರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರು.
ಬಸವರಾಜನನ್ನು ಪರೀಕ್ಷಿಸಿದ ವೈದ್ಯರು ಆತ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ಶಿಕ್ಷಕರಿಗೆ ತಿಳಿಸಿದ್ದು ಆ ಬಳಿಕ ಶಿಕ್ಷಕರು ಈ ವಿಷಯವನ್ನು ಬಾಲಕನ ಪೋಷಕರಿಗೆ ತಿಳಿಸಿದ್ದರು. ಇದೇ ವಿಚಾರವಾಗಿ ಪೋಷಕರು ಬಿಇಒ ಅಧಿಕಾರಿಗೆ ದೂರು ನೀಡಿದ್ದು ಈ ದೂರಿನನ್ವಯ ಮೂವರು ಶಿಕ್ಷಕರನ್ನು ಅಮಾನತುಗೊಳಿಸಿದ್ದು ತನಿಖೆಗೆ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT