ಸ್ಲಮ್ ಭರತ್ 
ರಾಜ್ಯ

ಬೆಂಗಳೂರು: ಕುಖ್ಯಾತ ರೌಡಿ ಶೀಟರ್ ಸ್ಲಮ್ ಭರತ್ ಅರೆಸ್ಟ್!

ಕುಖ್ಯಾತ ರೌಡಿ ಶೀಟರ್ ಸ್ಲಮ್ ಭರತ್ ನನ್ನು ಪೋಲೀಸರು ಬಂಧಿಸಿದ್ದಾರೆ. ಕೆಂಗೇರಿ ವ್ಯಾಪ್ತಿಯಲ್ಲಿ ಭರತ್ ಇದ್ದ ಮಾಹಿತಿ ಪಡೆದ ಸಿಸಿಬಿ ಅವನ ಬಂಧನಕ್ಕಾಗಿ ತೆರಳಿದಾಗ ಪೇದೆ ಹನುಮೇಶ್....

ಬೆಂಗಳೂರು: ಕುಖ್ಯಾತ ರೌಡಿ ಶೀಟರ್ ಸ್ಲಮ್ ಭರತ್ ನನ್ನು ಪೋಲೀಸರು ಬಂಧಿಸಿದ್ದಾರೆ. ಕೆಂಗೇರಿ ವ್ಯಾಪ್ತಿಯಲ್ಲಿ  ಭರತ್ ಇದ್ದ ಮಾಹಿತಿ ಪಡೆದ ಸಿಸಿಬಿ  ಅವನ ಬಂಧನಕ್ಕಾಗಿ ತೆರಳಿದಾಗ ಪೇದೆ ಹನುಮೇಶ್ ಎನ್ನುವವರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ಭರತ್ ಮೇಲೆ ಪೋಲೀಸರು ಫೈರಿಂಗ್ ನಡೆಸಿದರು. ಬಳಿಕ ಆತನನ್ನು ಬಂಧಿಸಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.
ನಾಲ್ಕು ಕೊಲೆ, ದರೋಡೆ ಸೇರಿ ಅರವತ್ತಕ್ಕೂ ಹೆಚ್ಚಿನ ಪ್ರಕರಣಗಳಲ್ಲಿ ಭರತ್ ಪೋಲೀಸರಿಗೆ ಬೇಕಾದವನಾಗಿದ್ದ.
ಮಂಗಳವಾರ ಸಂಜೆ ರೌಡಿ ಶೀಟರ್ ಬಂಧನದ ವೇಳೆ ತಪ್ಪಿಸಿಕೊಳ್ಳುವ ಯತ್ನದಲ್ಲಿದ್ದಾಗ ಪಿಎಸ್‍ಐ ಪ್ರವೀಣ್ ಅವನ ಮೇಲೆ ಗುಂಡು ಹಾರಿಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಘಟನೆ ವೇಳೆ ಗಾಯಗೊಂಡ ಪೋಲೀಸ್ ಸಿಬ್ಬಂದಿ ಹನುಮೇಶ್ ಗೆ ಸಹ ಆಸ್ಪತ್ರೆಯಲ್ಲಿ ಚಿಕಿತ್ಸೆ ನಿಡಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT