ಹಂಪಿ (ಸಂಗ್ರಹ ಚಿತ್ರ) 
ರಾಜ್ಯ

ಹಂಪಿ ಸ್ಮಾರಕಗಳಿಗೆ ಹಾನಿ: ಅಪರಾಧಿಗಳ ಶೋಧಕ್ಕಾಗಿ ಬಿಹಾರಕ್ಕೆ ತೆರಳಿದ ಬಳ್ಳಾರಿ ಪೊಲೀಸರು!

ಹಂಪಿಯ ಸ್ಮಾರಕಗಳನ್ನು ಧ್ವಂಸಗೊಳಿಸಿದ ಆರೋಪದ ಮೇಲೆ ಅಪರಾಧಿಗಳನ್ನು ಪತ್ತೆ ಹಚ್ಚಲು ಬಳ್ಳಾರಿ ಪೊಲೀಸರು ಬಿಹಾರಕ್ಕೆ ತೆರಳಿದ್ದಾರೆ...

ಬಳ್ಳಾರಿ: ಹಂಪಿಯ ಸ್ಮಾರಕಗಳನ್ನು ಧ್ವಂಸಗೊಳಿಸಿದ ಆರೋಪದ ಮೇಲೆ ಅಪರಾಧಿಗಳನ್ನು ಪತ್ತೆ ಹಚ್ಚಲು ಬಳ್ಳಾರಿ ಪೊಲೀಸರು ಬಿಹಾರಕ್ಕೆ ತೆರಳಿದ್ದಾರೆ,
ಹಂಪಿಯಲ್ಲಿ ಸ್ಮಾರಕಗಳನ್ನು ಧ್ವಂಸಗೊಳಿಸಿದ ವಿಡಿಯೋ ಕಳೆದ ವಾರ ವೈರಲ್ ಆಗಿತ್ತು.  ಬೆಂಗಳೂರು ಮೂಲದ ರ್ಯಾಪರ್ ಔಶ್ ಶಹಾ ಸಾಮಾಜಿಕ ಮಾಧ್ಯಮಗಳಲ್ಲಿ ಹರಿ ಬಿಟ್ಟಿದ್ದರು. ಈ ವಿಡಿಯೋ ನೋಡಿ ಸಾಕಷ್ಟು ಮಂದಿ ಕಿಡಿ ಕಾರಿದ್ದರು. 
ಈ ಸಂಬಂಧ ಪ್ರಾಚ್ಯ ಸಂಶೋಧನಾ ಇಲಾಖೆ ದೂರು ದಾಖಲಿಸಿತ್ತು. ಬಳ್ಳಾರಿ ಪೊಲೀಸರು ಬಿಹಾರ ತಲುಪಿದ್ದಾರೆ. ಪ್ರಕರಣದಲ್ಲಿ ಭಾಗಿಯಾದವರ ಬಗ್ಗೆ ಸುಳಿವು ಸಿಕ್ಕಿದ್ದು, ವಿಡಿಯೋ ಜೊತೆ ಪೊಲೀಸರು ಬಿಹಾರ ತಲುಪಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಶೀಘ್ರವೇ ಆರೋಪಿಗಳನ್ನು ಬಂಧಿಸುವುದಾಗಿ ಪೊಲೀಸರು ವಿಶ್ವಾಸ ವ್ಯಕ್ತ ಪಡಿಸಿದ್ದಾರೆ,ಪ್ರಕರಣ ಸಂಬಂಧ ಕೆಲವು ಸ್ಥಳೀಯರನ್ನು ವಿಚಾರಣೆ ನಡೆಸಲಾಗಿದೆ, ಸದ್ಯ ಪ್ರಕರಣ ತನಿಖಾ ಹಂತದಲ್ಲಿದ್ದು, ಹೆಚ್ಚಿನ ಮಾಹಿತಿ ಬಹಿರಂಗ ಪಡಿಸಲು ಸಾಧ್ಯವಿಲ್ಲ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ..

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT