ಉಡುಪಿ ಜೋಡಿ ಕೊಲೆ ಪ್ರಕರಣ: ಜಿ.ಪಂ. ಸದಸ್ಯ ಸೇರಿ 6 ಜನರ ಬಂಧನ 
ರಾಜ್ಯ

ಉಡುಪಿ ಜೋಡಿ ಕೊಲೆ ಪ್ರಕರಣ: ಜಿ.ಪಂ. ಸದಸ್ಯ ಸೇರಿ 6 ಜನರ ಬಂಧನ

ಉಡುಪಿ ಜಿಲ್ಲೆ ಕೋಟಾದಲ್ಲಿ ನಡೆದ ಸ್ನೇಹಿತರಿಬ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಜಿಲ್ಲಾ ಪಂಚಾಯತ್ ಸದಸ್ಯನೂ ಸೇರಿ ಆರು ಮಂದಿಯನ್ನು ಪೋಲೀಸರು ವಶಕ್ಕೆ ಪಡೆದಿದ್ದಾರೆ.

ಉಡುಪಿ: ಉಡುಪಿ ಜಿಲ್ಲೆ ಕೋಟಾದಲ್ಲಿ ನಡೆದ ಸ್ನೇಹಿತರಿಬ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ  ಜಿಲ್ಲಾ ಪಂಚಾಯತ್ ಸದಸ್ಯನೂ ಸೇರಿ ಆರು ಮಂದಿಯನ್ನು ಪೋಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತ ಜಿಲ್ಲಾ ಪಂಚಾತಯ್ ಸದಸ್ಯನನ್ನು ರಾಘವೇಂದ್ರ ಕಾಂಚನ್ (38) ಎಂದು ಗುರುತಿಸಲಾಗಿದೆ. ಈತ ಬಿಜೆಪಿ ಬೆಂಬಲಿತ ಸದಸ್ಯನಾಗಿದ್ದನು ಎನ್ನಲಾಗಿದೆ.
ಉಡುಪಿ ಡಿವೈಎಸ್ಪಿ ಜೈಶಂಕರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದು ರಾಜಶೇಖರ ರೆಡ್ಡಿ, ಜೆ. ರವಿ ಅಲಿಯಾಸ್ ಮೆಡಿಕಲ್ ರವಿ, ಹರೀಶ್ ರೆಡ್ಡಿ, ಮಹೇಶ್ ಗಾಣಿಗ ಮತ್ತು ರವಿ ಅಲಿಯಾಸ್ ರವಿಚಂದ್ರ ಪೂಜಾರಿ ಎಂಬುವವರನ್ನು ಬಂಧಿಸಲಾಗಿದೆ. ಬಂಧಿತರನ್ನು ಶುಕ್ರವಾರ ಕುಂದಾಪುರದ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯ ಆರೋಪಿಗಳನ್ನು 8 ದಿನಗಳ ಕಾಲ ಪೋಲೀಸ್ ಕಸ್ಟಡಿಗೆ ಒಪ್ಪಿಸಿದೆ.
ಶೌಚಾಲಯ ಹೊಂಡದ ಜಾಗದ ವಿಚಾರವಾಗಿ ಜಗಳವಾಗಿದ್ದಾಗ ತಮ್ಮ ಸ್ನೇಹಿತ ರೋಹಿತ್ ಪರ ಮಾತನಾಡಲು ತೆರಳಿದ್ದ ಇಬ್ಬರು ಯುವಕರನ್ನು ಜನವರಿ 27ರ ಮುಂಜಾನೆ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲ್ಲಲಾಗಿತ್ತು.
ಪ್ರಕರಣದಲ್ಲಿ ಭಾಗಿಗಳಾದವರಲ್ಲಿ ಮೂವರು ರೌಡಿ ಶೀಟರ್ ಗಳಾಗಿದ್ದು ಇನ್ನುಳಿದ ಆರೋಪಿಗಳ ಶೋಧಕಾರ್ಯ ಮುಂದುವರಿದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT