ಸಿದ್ದರಾಮಯ್ಯ-ನಿರಂಜನಾನಂದಪುರಿ ಸ್ವಾಮೀಜಿ
ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಸೋಲಿಸಿದ್ದರ ಪರಿಣಾಮ ಕೊಡಗಿನಲ್ಲಿ ಜಲಪ್ರಳಯವಾಗಿದೆ ಎಂದು ಕನಕ ಪೀಠದ ನಿರಂಜನಾನಂದಪುರಿ ಸ್ವಾಮೀಜಿ ಅವರು ಹೇಳಿದ್ದಾರೆ.
ಮೈಸೂರಿನಲ್ಲಿ ಕನಕ ಭವನ ಉದ್ಘಾಟನೆ ವೇಳೆ ಮಾತನಾಡಿದ ಅವರು, ಹಾಲುಮತ ಸಮಾಜದ ನಾಯಕರು ಸಮಾಜದ ಅಭಿವೃದ್ಧಿ, ಏಳಿಗೆಗಾಗಿ ದುಡಿದರು. ಅವರಿಗೆ ಅನ್ಯಾಯವಾದ ಸಂದರ್ಭದಲ್ಲಿ ಪ್ರಕೃತಿ ಮುನಿಸಿಕೊಂಡು ತನ್ನ ಆರ್ಭಟ ಪ್ರದರ್ಶಿಸಿತ್ತು ಎಂದರು.
ಈ ವಿಷಯವನ್ನು ಅಂದೆ ನಾನು ಹೇಳಬೇಕೆಂದುಕೊಂಡಿದ್ದೆ ಆದರೆ ಆಗ ನನಗೆ ಸೂಕ್ತ ವೇದಿಕೆ ಸಿಕ್ಕಿರಲಿಲ್ಲ. ಇಂದು ನನ್ನ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದೇನೆ. ಹೀಗಾಗಿ ಸಿದ್ದರಾಮಯ್ಯ ಸೇರಿ ನಮ್ಮ ಸಮಾಜದ ಯಾವುದೇ ನಾಯಕರ ಬಗ್ಗೆ ಹೀನಾಯವಾಗಿ ಮಾತನಾಡಬಾರದು ಎಂದು ಸ್ವಾಮೀಜಿಗಳು ಸಿದ್ದರಾಮಯ್ಯ ವಿರೋಧಿಗಳಿಗೆ ಸಂದೇಶ ರವಾನಿಸಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos