ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ತಾಯಿಯ ಸಹೋದ್ಯೋಗಿ ಮೇಲೆ ಅತ್ಯಾಚಾರಕ್ಕೆ ಯತ್ನ, ಯುವಕನ ಬಂಧನ

ಯಶವಂತಪುರದ ತಾಜ್ ಹೋಟೆಲ್ ನಲ್ಲಿ ಮಹಿಳೆಯ ಮೇಲೆ ಪರಿಚಯಸ್ಥನೇ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಆರ್ ಎಂಸಿ ಯಾರ್ಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ...

ಬೆಂಗಳೂರು: ಯಶವಂತಪುರದ ತಾಜ್ ಹೋಟೆಲ್ ನಲ್ಲಿ ಮಹಿಳೆಯ ಮೇಲೆ ಪರಿಚಯಸ್ಥನೇ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಆರ್ ಎಂಸಿ ಯಾರ್ಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಶುಕ್ರವಾರ ರಾತ್ರಿ 39 ವರ್ಷದ ಮಹಿಳೆ ಮೇಲೆ 23 ವರ್ಷದ ನಿತಿನ್ ಮುಖರ್ಜಿ ಎಂಬಾತ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ, ಕೊಲ್ಕೊತ್ತಾದ ಕಂಪನಿಯೊಂದರಿಂದ ಬೆಂಗಳೂರಿನಲ್ಲಿ  ನಡೆಯುತ್ತಿದ್ದ ಸಮಾವೇಶಕ್ಕೆ ಆಗಮಿಸಿದ್ದರು. ಮಹಿಳೆಯು ವಾಸವಿದ್ದ ಪಕ್ಕದ ಕೊಠಡಿಯಲ್ಲಿಯೇ ಇದ್ದ, 
ರಾತ್ರಿ 11.45 ರ ಸುಮಾರಿಗೆ ನೀರು ಕೇಳುವ ನೆಪದಲ್ಲಿ ಬಂದ ಆರೋಪಿ, ಆಕೆಯನ್ನು ಹಿಡಿದೆಳೆದಿದ್ದಾನೆ, ಹಾಸಿಗೆ ಮೇಲೆ ತಳ್ಳಿ ಆಕೆಗೆ ಲೈಂಗಿಕ ಕಿರುಕುಳ ನೀಡಲು ಆರಂಭಿಸಿದ್ದಾನೆ,ನಂತರ ಬಾತ್ ರೂಂ ಗೆ ಎಳೆದೊಯ್ದು, ಸಿಗರೇಟ್ ನ್ನು ಆಕೆಯ ಬಾಯಿಗಿಟ್ಟು ದೂಮುಪಾನ ಮಾಡುವಂತೆ ಒತ್ತಾಯಿಸಿದ್ದಾನೆ, ನಾನು ಮಗುವಿನ ತಾಯಿ,ನೀನು ನನ್ನನ್ನು ನಿನ್ನ ತಾಯಿಯಂತೆ ನೋಡಬೇಕು ಎಂದು ಹೇಳಿದ್ದಾರೆ,
ಆಕೆಯ ಮೇಲೆ ಅಕ್ರಮಣ ಮಾಡಲು ಪ್ರಯತ್ನಿಸಿದ ಆತ ಆಕೆಯ ತಲೆಯನ್ನು ಪದೇ ಪದೇ ಗೋಡೆಗೆ ಬಡಿದಿದ್ದಾನೆ, ಸುಮಾರು 30 ನಿಮಿಷಗಳ ಹೋರಾಟದ ನಂತರ ಆತನಿಂದ ತಪ್ಪಿಸಿಕೊಳ್ಳಲು ಸಫಲರಾಗಿದ್ದಾರೆ, ನಂತರ ಆಕೆ ಜೋರಾಗಿ ಕಿರುಚಿಕೊಂಡಿದ್ದಾರೆ, ನಂತರ ರೂಂ ನಿಂದ ಓಡಿಹೋಗಿ, ವಿಷಯವನ್ನು ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದಾನೆ,
ಆರೋಪಿ ಮುಖರ್ಜಿ ತಾಯಿ ಮತ್ತು ಮಹಿಳೆ ಇಬ್ಬರು ಕೊಲ್ಕೊತಾದ ಅಪ್ಯಾರೆಲ್ ಕಂಪನಿಯ ಉದ್ಯೋಗಿಯಾಗಿದ್ದಾರೆ. ಕೂಡಲೇ ತನ್ನ ಪತಿಗೆ ಕರೆ ಮಾಡಿದ ಮಹಿಳೆ ನಡೆದ ಘಟನೆಯನ್ನು ತಿಳಿಸಿದ್ದಾರೆ, ಮಹಿಳೆಯ ಪತಿ ಹೊಟೇಲ್ ಸಿಬ್ಬಂದಿಗೆ ಕರೆ ಮಾಡಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ, ಆರೋಪಿ  ತನ್ನ ತಪ್ಪೊಪ್ಪಿಕೊಂಡಿದ್ದಾನೆ,  ಹೋಟೆಲ್ ನ ಸಿಸಿಟಿವಿ ಫೂಟೇಜ್ ಅನ್ನು ಪೊಲೀಸರಿಗೆ ನೀಡಿರುವುದಾಗಿ ಹೋಟೆಲ್ ಮ್ಯಾನೇಜ್ ಮೆಂಟ್ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT