ಲೇಡಿ ಡಾನ್ ಯಶಸ್ವಿನಿ ಗೌಡ 
ರಾಜ್ಯ

ಲೇಡಿ ಡಾನ್ ಯಶಸ್ವಿನಿ ಗೌಡ ಮೇಲೆ ಗೂಂಡಾ ಕಾಯಿದೆ ಜಾರಿಗೆ ಪೊಲೀಸರ ಚಿಂತನೆ!

: ರೌಡಿ ಶೀಟರ್ ಲೇಡಿ ಡಾನ್ ಯಶಸ್ವಿನಿ ಗೌಡ ವಿರುದ್ಧ ಗೂಂಡಾ ಕಾಯಿದೆ ದಾಖಲಿಸಿಲು ಬೆಂಗಳೂರು ನಗರ ಪೊಲೀಸರು ಚಿಂತನೆ ನಡೆಸಿದ್ದಾರೆ,...

ಬೆಂಗಳೂರು: ರೌಡಿ ಶೀಟರ್ ಲೇಡಿ ಡಾನ್ ಯಶಸ್ವಿನಿ ಗೌಡ ವಿರುದ್ಧ ಗೂಂಡಾ ಕಾಯಿದೆ ದಾಖಲಿಸಿಲು ಬೆಂಗಳೂರು ನಗರ ಪೊಲೀಸರು ಚಿಂತನೆ ನಡೆಸಿದ್ದಾರೆ,
ಇತ್ತೀಚೆಗೆ ನಗರದ ಮಹಿಳೆಯೊಬ್ಬರ ಮೇಲೆ ಲೇಡಿ ಡಾನ್ ಯಶಸ್ವಿನಿ ಹಲ್ಲೆ ನಡೆಸಿದ್ದಳು, ಆಕೆಯ ವಿರುದ್ಧ ಉತ್ತರ ವಿಭಾಗದಲ್ಲಿ ಪ್ರಕರಣ ದಾಖಲಾಗಿದೆ. ಒಂದು ವೇಳೆ ಆಕೆಯ ವಿರುದ್ಧ ಗೂಂಡಾ ಕಾಯಿದೆ ಜಾರಿ ಮಾಡಿದರೇ ನಗರದಲ್ಲಿ ಗೂಂಡಾ ಕಾಯಿದೆಗೊಳಗಾದ ಮೊಟ್ಟ ಮೊದಲ ಮಹಿಳೆಯಾಗಲಿದ್ದಾಳೆ.
ಯಶಸ್ವಿನಿ ವಿರುದ್ದ 2 ಪ್ರಕರಣಗಳು ದಾಖಲಾಗಿವೆ, ಬೆಂಗಳೂರು ದಕ್ಷಿಣ ಅಥವಾ ಬೆಂಗಳೂರು ಉತ್ತರ ವಿಭಾಗದ ಪೊಲೀಸರು ಗೂಂಡಾ ಕಾಯ್ದೆ ಜಾರಿಗೊಳಿಸುತ್ತಾರೋ ಎಂಬುದು ಇನ್ನೂ ನಿರ್ಧಾರವಾಗಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ,
ಚನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಲವು ಹಲ್ಲೆ ಹಾಗೂ ಬೆದರಿಕೆ ಪ್ರಕರಣಗಳಲ್ಲಿ ಯಶಸ್ವಿನಿ ಭಾಗಿಯಾಗಿದ್ದಾಲೆ, ಇತ್ತೀಚೆಗೆ ಗಂಗಮ್ಮನಗುಡಿಯಲ್ಲಿ 42 ವರ್ಷದ ಮಹಿಳೆ ಮೇಲೆ ಹಲ್ಲೆ ನಡೆಸಿದ್ದಳು.
ಆಕೆಯ ವಿರುದ್ಧ ಯಶವಂತಪುರ ಉಪ ವಿಭಾಗದಲ್ಲಿ ಪ್ರಕರಣ ದಾಖಲಾದ ದಿನದಿಂದ ಆಕೆ ನಾಪತ್ತೆಯಾಗಿದ್ದಾಳೆ, ಆಕೆಯ ಸಹಚರ ಗೋವಿಂದ ರಾಜ್ ಠಾಣೆಗೆ ಬಂದು ಲಲಿತಾ ಎಂಬ ಮಹಿಳೆ ತಪ್ಪು ಕೇಸ್ ದಾಖಲಿಸಿದ್ದಾರೆ ಎಂದು ಆರೋಪಿಸಿದ್ದಾನೆ, 
ಇನ್ನೂ ಅರುಣ ಎಂಬ ಪ್ರತ್ಯಕ್ಷ ದರ್ಶಿ  ಘಟನೆ ಬಗ್ಗೆ ಪೊಲೀಸರಿಗೆ ಸಾಕ್ಷಿ ಹೇಳಿದ್ದಕ್ಕೆ ಪೊಲೀಸ್ ಠಾಣೆಯಲ್ಲಿಯೇ ಅವರನ್ನು ಗೋವಿಂದರಾಜ್ ಥಳಿಸಿದ್ದು, ಪ್ರಕರಣವನ್ನು  ತನಿಖೆಗಾಗಿ ಮಲ್ಲೇಶ್ವರಂ ಠಾಣೆಗೆ ವರ್ಗಾಯಿಸಿದ್ದಾರೆ.
ಮುನಿಯಮ್ಮ ಅಥವಾ ಯಶಸ್ವಿನಿ ಬಸವನಗುಡಿ ಠಾಣೆಯ ವ್ಯಾಪ್ತಿಯಲ್ಲಿ ಲೇಡಿ ಡಾನ್ ಆಗಿದ್ದಳು, ಶ್ರೀರಾಮ ಸೇನೆ ಮಹಿಳಾ ವಿಭಾಗದ ಅಧ್ಯಕ್ಷೆ ಆಗಿರುವ ಯಶಸ್ವಿನಿ ಮೀಟರ್ ಬಡ್ಡಿ ದಂಧೆ ನಡೆಸುತ್ತಿದ್ದಳು, ಜೊತೆಗೆ ಆಕೆಯ ವಿರುದ್ಧ ಬೆದರಿಕೆ ಹಾಗೂ ಸುಲಿಗೆ ಪ್ರಕರಣಗಳು ದಾಖಲಾಗಿವೆ, ಕೆಲವರು ಮಾತ್ರ ಆಕೆಯ ವಿರುದ್ಧ ಪ್ರಕರಣ ದಾಖಲಿಸಲು ಧೈರ್ಯ ತೋರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT