ಸಂಗ್ರಹ ಚಿತ್ರ 
ರಾಜ್ಯ

ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ: ಖಾನಾಪುರದಲ್ಲಿ ರೈಲುಗಳ ನಿಲುಗಡೆ- ಅನಂತ್ ಕುಮಾರ್ ಹೆಗಡೆ

ಖಾನಾಪುರದಲ್ಲಿ ಫೆ.15ರಿಂದ ನಡೆಯಲಿರುವ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ಪ್ರಯುಕ್ತ ಈ ಮಾರ್ಗದಿಂದ ಹಾದು ಹೋಗುವ ತಡೆ ರಹಿತ ರೈಲುಗಳ ನಿಲುಗಡೆ ಮಾಡಲಾಗುತ್ತಿದ್ದು, ಭಕ್ತರು ಇದರ ಸದುಪಯೋಗ ಪಡೆಯಬೇಕೆಂದು ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಮನವಿ ಮಾಡಿದ್ದಾರೆ.

ಬೆಳಗಾವಿ: ಜಿಲ್ಲೆಯ ಖಾನಾಪುರದಲ್ಲಿ ಫೆ.15ರಿಂದ ನಡೆಯಲಿರುವ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ಪ್ರಯುಕ್ತ ಈ ಮಾರ್ಗದಿಂದ ಹಾದು ಹೋಗುವ ತಡೆ ರಹಿತ ರೈಲುಗಳ ನಿಲುಗಡೆ ಮಾಡಲಾಗುತ್ತಿದ್ದು, ಭಕ್ತರು ಇದರ ಸದುಪಯೋಗ ಪಡೆಯಬೇಕೆಂದು ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಮನವಿ ಮಾಡಿದ್ದಾರೆ.

ಫೆಬ್ರವರಿ 15ರಿಂದ ಮಾರ್ಚ್ 5ರವರೆಗೆ ಮಹಾಲಕ್ಷ್ಮೀಯ ಜಾತ್ರಾ ಮಹೋತ್ಸವ ನೆರವೇರಲಿದ್ದು, ಲಕ್ಷಾಂತರ ಜನ ಭಕ್ತರು ದೇವಿ ದರ್ಶನಕ್ಕೆ ಆಗಮಿಸುತ್ತಾರೆ. ಆದ್ದರಿಂದ ಈ ಮಾರ್ಗದಿಂದ ಹಾದು ಹೋಗುವ ತಡೆ ರಹಿತ ರೈಲುಗಳನ್ನು ನಿಲುಗಡೆ ಕ್ರಮ ಕೈಗೊಳ್ಳಬೇಕು ಎಂದು ರೈಲ್ವೆ ಸಚಿವರಿಗೆ ಮನವಿ ಮಾಡಲಾಗಿತ್ತು. ಮನವಿಗೆ ಸ್ಪಂದಿಸಿದ ಸಚಿವರು ರೈಲು ನಿಲುಗಡೆಗೆ ಕ್ರಮ ಕೈಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಬೆಂಗಳೂರು-ಅಜ್ಮಿರ್ ಗರಿಬ್ ನವಾಜ್ ಎಕ್ಸ್ ಪ್ರೆಸ್ (16532), ಅಜ್ಮಿರ್-ಬೆಂಗಳೂರು ಗರಿಬ್ ನವಾಜ್ (16531), ಬೆಂಗಳೂರು-ಭಗತ್ ಕಿ ಕೋಠಿ ಗರಿಬ್ ನವಾಜ್ (16534), ಭಗತ್ ಕಿ ಕೋಠಿ -ಬೆಂಗಳೂರು ಗರಿಬ್ ನವಾಜ್ (16533), ಪುಣೆ-ಎರ್ನಾಕುಲಂ ಎಕ್ಸಪ್ರೆಸ್ (11097), ಎರ್ನಾಕುಲಂ-ಪುಣೆ ಎಕ್ಸಪ್ರೆಸ್ (11098), ಮುನುಗುರು-ಛತ್ರಪತಿ ಸಾಹು ಮಹಾರಾಜ್ ಟರ್ಮಿನಲ್ ಕೊಲ್ಹಾಪುರ ಎಕ್ಸಪ್ರೆಸ್  (11303), ಹಾಗೂ ಛತ್ರಪತಿ ಸಾಹು ಮಹಾರಾಜ್ ಟರ್ಮಿನಲ್ ಕೊಲ್ಹಾಪುರ ಎಕ್ಸ ಪ್ರೆಸ್ (11304) ರೈಲುಗಳು ಖಾನಾಪುರ ನಿಲ್ದಾಣದಲ್ಲಿ ನಿಲುಗಡೆಯಾಗಲಿವೆ ಎಂದು ಹೆಗಡೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ಶಿವಮೊಗ್ಗ: 10 ಕಿಲೋ ವ್ಯಾಟ್ FM ಟ್ರಾನ್ಸ್ಮಿಟರ್ ಕೇಂದ್ರ ಉದ್ಘಾಟನೆ! ಆಕಾಶವಾಣಿ, ದೂರದರ್ಶನ ಅಭಿವೃದ್ದಿಗೆ 2,500 ಕೋಟಿ ಹಣ ವೆಚ್ಚ- ಡಾ. ಎಲ್ ಮುರುಗನ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

SCROLL FOR NEXT