ಧರ್ಮಸ್ಥಳದಲ್ಲಿ ಮಹಾಮಜ್ಜನ, ರಂಗುಗಳಲ್ಲಿ ಕಂಗೊಳಿಸಿದ ವೈರಾಗ್ಯ ಮೂರ್ತಿ 
ರಾಜ್ಯ

ಚಿತ್ರ ವರದಿ: ಧರ್ಮಸ್ಥಳದಲ್ಲಿ ಮಹಾಮಜ್ಜನ, ರಂಗುಗಳಲ್ಲಿ ಕಂಗೊಳಿಸಿದ ವೈರಾಗ್ಯ ಮೂರ್ತಿ

ನ್ನೆರಡು ವರ್ಷಗಳಿಗೊಮ್ಮೆ ನಡೆಯುವ ಬಾಹುಬಲಿಯ ಮಹಾಮಸ್ತಕಾಭಿಷೇಕ ಸಂಭ್ರಮ ಪ್ರಖ್ಯಾತ ಧಾರ್ಮಿಕ ತಾಣ ಧರ್ಮಸ್ಥಳದಲ್ಲಿ ಮನೆಮ್ಮಾಡಿದ್ದು ದೇಶಾದ್ಯಂತದ....

ಧರ್ಮಸ್ಥಳ: ಹನ್ನೆರಡು ವರ್ಷಗಳಿಗೊಮ್ಮೆ ನಡೆಯುವ ಬಾಹುಬಲಿಯ ಮಹಾಮಸ್ತಕಾಭಿಷೇಕ ಸಂಭ್ರಮ ಪ್ರಖ್ಯಾತ ಧಾರ್ಮಿಕ ತಾಣ ಧರ್ಮಸ್ಥಳದಲ್ಲಿ ಮನೆಮ್ಮಾಡಿದ್ದು ದೇಶಾದ್ಯಂತದ  ಸಾವಿರಾರು ಭಕ್ತರು ಶನಿವಾರ ಇಲ್ಲಿ ರತ್ನಗಿರಿ ಬೆಟ್ಟದ ಮೇಲಿನ ಬಾಹುಬಲಿಯ ಮಹಾಮಜ್ಜನಕ್ಕೆ ಸಾಕ್ಷಿಯಾಗಿದ್ದರು.
ಳು ದಿನಗಳ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಗಳ ನಂತರ ಶನಿವಾರದಿಂದ ಮಹಾಮಜ್ಜನ ಕಾರ್ಯಕ್ರ್ಮ ಪ್ರಾರಂಭಗೊಂಡಿದ್ದು ಭಾನುವಾರ, ಸೋಮವಾರಗಳವರೆಗೂ ಮುಂದುವರಿಯಲಿದೆ.
ಬಾಹುಬಲಿ ಪ್ರತಿಷ್ಠಾಪಕರಾದ ಧರ್ಮಾಧಿಕಾರಿ ಡಾ. ವಿಏಂದ್ರ ಹೆಗ್ಗಡೆ ಹಾಗೂ ಕುಟುಂಬ ವತಿಯಿಂದ ಮೊದಲ ದಿನದ ಅಭಿಷೇಕ ನೆರವೇರಿದೆ.ಒಂಬತ್ತು ದ್ರವ್ಯಗಳನ್ನು ಬಳಸಿ ಮಹಾಮಸ್ತಕಾಭಿಷೇಕ ಮಾಡಲಾಗಿದ್ದು ಬಾಹುಬಲಿ ಹಲವು ರಂಗುಗಳಿಂದ ಕಂಗೊಳಿಸಿದನು.
ಜೈನ ಮುನಿಗಳು ಮತ್ತು ಮಾತಾಜಿಗಳು ಹೊರತಾಗಿ  ಸುಮಾರು 100 ಸಂತರು 1,008 ಕಲಾಶಗಳಿಂದ ಬಾಹುಬಲಿ ಜಲಾಭಿಷೇಕದಲ್ಲಿ ಭಾಗವಹಿಸಿದ್ದರು.ಬೆಳಗ್ಗೆ 8.45ಕ್ಕೆ ಪರಿಶುದ್ಧ ಜಲಾಭಿಷೇಕದೊಡನೆ ಮಹಾಮಜ್ಜನ ಪ್ರಾರಂಭವಾಗಿತ್ತು. ಆ ನಂತರ ಎಳನೀರುಉ, ಇಕ್ಷ ುರಸ, ಕ್ಷೀರ, ಕಲ್ಕಚೂರ್ಣ, ಅರಿಶಿಣ ,ಕಷಾಯ , ಚತುಷ್ಕೋನ , ಕಾಶ್ಮೀರ ಕೇಸರಿ, ಶ್ರೀಗಂಧ, ಚಂದನ, ಅಷ್ಟಗಂಧ, ಕನಕಾಭಿಷೇಕಗಳು ನಡೆದು ಬೃಹತ್ ಹಾರವನ್ನು ಬಾಹುಬಲಿಗೆ ಹಾಕಲಾಗಿತ್ತು.
ರತ್ನಗಿರಿ ಬೆಟ್ಟದಲ್ಲಿ ಸಾವಿರಾರು ಭಕ್ತ ಜನರು ನೆರೆದಿದ್ದರೂ ಎಲ್ಲಿಯೂ ಗೊಂದಲ, ಗಲಾಟೆಗಳಿಲ್ಲದೆ ಶಾಂತಿಯುತವಾಗಿ ಮೊದಲ ದಿನದ ಮಸ್ತಕಾಭಿಷೇಕ ಸಂಪನ್ನವಾಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT