ಹುತಾತ್ಮ ಯೋಧ ಗುರು ಮತ್ತು ಪತ್ನಿ ಕಲಾವತಿ(ಸಂಗ್ರಹ ಚಿತ್ರ) 
ರಾಜ್ಯ

ನನ್ನನ್ನೂ ಸೇನೆಗೆ ಸೇರಿಸಿಕೊಳ್ಳಿ; 4 ತಿಂಗಳ ಗರ್ಭಿಣಿ ಕಲಾವತಿಯ ಕೆಚ್ಚೆದೆಯ ಮಾತು

ಪುಲ್ವಾಮಾ ಉಗ್ರಗಾಮಿ ದಾಳಿಯಲ್ಲಿ ಹುತಾತ್ಮರಾದ ಜಿಲ್ಲೆಯ ಗುಡಿಗೆರೆ ಗ್ರಾಮದ ಯೋಧ ಗುರುವಿನ ...

ಮಂಡ್ಯ: ಪುಲ್ವಾಮಾ ಉಗ್ರಗಾಮಿ ದಾಳಿಯಲ್ಲಿ ಹುತಾತ್ಮರಾದ ಜಿಲ್ಲೆಯ ಗುಡಿಗೆರೆ ಗ್ರಾಮದ ಯೋಧ ಗುರುವಿನ ಪತ್ನಿ ಕಲಾವತಿ ನಾಲ್ಕು ತಿಂಗಳ ಗರ್ಭವತಿ.
ಈ ವಿಷಯ ನಿನ್ನೆ ಗುರುವಿನ ತಾಯಿ ಚಿಕ್ಕೋಳಮ್ಮ ಅವರಿಂದಲೇ ತಿಳಿದುಬಂತು. ಹುತಾತ್ಮ ಗುರುವಿನ ಅಂತ್ಯಸಂಸ್ಕಾರಕ್ಕೆ ಮುನ್ನ ಮಾಧ್ಯಮ ಪ್ರತಿನಿಧಿಗಳು ಅವರನ್ನು ಮಾತನಾಡಿಸಿದ ಸಂದರ್ಭದಲ್ಲಿ, ನನ್ನ ಮಗ ಕರ್ತವ್ಯದಲ್ಲಿರುವಾಗ ಮೃತಪಟ್ಟಿದ್ದರೆ ನಾನಿಂದು ಇಷ್ಟು ಅಳುತ್ತಿರಲಿಲ್ಲ. ಊರಿನಿಂದ ರಜೆ ಮುಗಿಸಿಕೊಂಡು ಹೋಗುವಾಗಲೇ ಪಾಪಿಗಳು ಕೊಂದು ಹಾಕಿದ್ದಾರೆ. ಆತ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ್ದಾನೆ, ಆ ಬಗ್ಗೆ ನನಗೆ ಹೆಮ್ಮೆಯಿದೆ ಎಂದರು.
ನನ್ನ ಸೊಸೆಗೆ ಮಗ ಹುಟ್ಟಿದರೆ ಅವನನ್ನು ಕೂಡ ಸೇನೆಗೆ ಕಳುಹಿಸುತ್ತೇನೆ, ನನ್ನ ಇನ್ನೊಬ್ಬ ಕಿರಿಯ ಮಗನನ್ನು ಕೂಡ ದೇಶಸೇವೆಗೆ ಕಳುಹಿಸಲು ನಾನು ಉತ್ಸುಕಳಾಗಿದ್ದೇನೆ ಎಂದು ಚಿಕ್ಕೋಳಮ್ಮ ದುಃಖದ ನಡುವೆಯೂ ಹೇಳಿದ್ದು ಎಂಥವರ ಮನಮಿಡಿಯುವಂತಿತ್ತು.
ಇನ್ನೊಂದೆಡೆ ಇಂದು ತಮ್ಮ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕಲಾವತಿ, ನನ್ನನ್ನೂ ಸೇನೆಗೆ ಸೇರಿಸಿಕೊಳ್ಳಿ. ಉಗ್ರರ ಚೆಂಡಾಡುತ್ತೇನೆ. ನನ್ನ ಪತಿ ಅರ್ಧಕ್ಕೆ ಬಿಟ್ಟು ಹೋಗಿರುವ ಕೆಲಸವನ್ನು ಪೂರೈಸುತ್ತೇನೆ. ನನ್ನ ಪತಿಯ ಆಸೆಗಳನ್ನು ಈಡೇರಿಸುತ್ತೇನೆ.
ಗುರು ಅವರ ಪತ್ನಿ ಅನ್ನೋದಕ್ಕೆ ನಿಜಕ್ಕೂ ಹೆಮ್ಮೆ ಎನಿಸಿದೆ. ದೇಶದ ಸೇವೆ ಮಾಡುವಾಗ ತನ್ನ ಪತಿ ದೇವರನ್ನು ಆ ದೇವರು ಕರೆದುಕೊಂಡು ಹೋಗಿ ಬಿಟ್ಟಿದ್ದಾರೆ. ಅವರ ಈಗ ಅರ್ಧ ಕೆಲಸ ಮಾಡಿದ್ದಾರೆ. ನಾನು ಉಳಿದ ಕೆಲಸವನ್ನು ಮಾಡಲು ಸಜ್ಜಾಗಿದ್ದೇನೆ. ಸೇನೆಗೆ ನಾನೂ ಸೇರಬೇಕು ಎನಿಸಿದೆ ಎಂದರು. 
ಬಹುತೇಕ ಪ್ರತಿದಿನವೂ ತನ್ನ ಪತಿ ಕರೆ ಮಾಡುತ್ತಿದ್ದರು. ಆದರೆ ದಾಳಿ ನಡೆದ ದಿನ ಸ್ವಲ್ಪ ಬ್ಯುಸಿಯಾಗಿದ್ದರು. ಹಾಗಾಗಿ ನಂತರ ಕರೆ ಮಾಡುವುದಾಗಿ ಹೇಳಿದ್ದರು. ಆದರೆ ಈ ಕರೆ ಬರಲೇ ಇಲ್ಲ. ನಾನು ಅವರೊಂದಿಗೆ ಮಾತನಾಡಲು ಸಾಧ್ಯವಾಗಲಿಲ್ಲ ಎಂದರು.  ಇನ್ನೂ 10 ವರ್ಷಗಳ ಕಾಲ ಸೇನೆಯಲ್ಲಿ ಸೇವೆ ಸಲ್ಲಿಸಬೇಕೆಂದು ಗುರು ಸದಾ ನನ್ನೊಂದಿಗೆ ಚರ್ಚಿಸುತ್ತಿದ್ದರು ಎಂದು ಕಲಾವತಿ ತಿಳಿಸಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಲಬುರಗಿ: ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

SCROLL FOR NEXT