ರಫೆಲ್ ಯುದ್ಧ ವಿಮಾನ 
ರಾಜ್ಯ

ರಫೆಲ್ ಒಪ್ಪಂದದಲ್ಲಿ ಹಗರಣ ನಡೆದಿಲ್ಲ; ನಿವೃತ್ತ ಏರ್ ಮಾರ್ಷಲ್

ರಫೆಲ್ ಯುದ್ಧ ವಿಮಾನ ಒಪ್ಪಂದದಲ್ಲಿ ಯಾವುದೇ ಹಗರಣ ನಡೆದಿಲ್ಲ, ಈಗ ವಿವಾದವಾಗುತ್ತಿರುವುದು ...

ಬೆಂಗಳೂರು: ರಫೆಲ್ ಯುದ್ಧ ವಿಮಾನ ಒಪ್ಪಂದದಲ್ಲಿ ಯಾವುದೇ ಹಗರಣ ನಡೆದಿಲ್ಲ, ಈಗ ವಿವಾದವಾಗುತ್ತಿರುವುದು ಆರಂಭದ ಹಂತದಲ್ಲಿ ಮಾಡಿದ ತಪ್ಪುಗಳು ಎಂದು ನಿವೃತ್ತ ಏರ ಮಾರ್ಷಲ್ ಬಿ ಕೆ ಮುರಳಿ ಹೇಳಿದ್ದಾರೆ.

ಅವರು ನಿನ್ನೆ ಬೆಂಗಳೂರಿನಲ್ಲಿ ಸಮಾರಂಭವೊಂದರಲ್ಲಿ ಮಾತನಾಡಿ, ದೇಶದಲ್ಲಿ ಯಾವುದೇ ಅಸ್ಥಿತ್ವವನ್ನು ಹೊಂದಿಲ್ಲದವರು ಅನಗತ್ಯವಾಗಿ ರಫೆಲ್ ಒಪ್ಪಂದದಲ್ಲಿ ವಿವಾದ ಸೃಷ್ಟಿಮಾಡುತ್ತಿದ್ದಾರೆ. ಅನಗತ್ಯವಾಗಿ ಈ ವಿಚಾರದಲ್ಲಿ ಮೂಗು ತೂರಿಸಲು ಯತ್ನಿಸಿದಾಗ ವಿವಾದ ಸೃಷ್ಟಿಯಾಗಿದೆ. ಭಾರತ ಮತ್ತು ಫ್ರಾನ್ಸ್ ನಡುವೆ ನಡೆದ ಒಪ್ಪಂದದಲ್ಲಿ ಯಾವುದೇ ಭ್ರಷ್ಟಾಚಾರ ನಡೆದಿಲ್ಲ, ಇದು ಸರ್ಕಾರ-ಸರ್ಕಾರದ ಮಧ್ಯೆ ಆದ ಒಪ್ಪಂದ ಎಂದರು.

ಯುದ್ಧ ವಿಮಾನ ಒಪ್ಪಂದದಿಂದ ಭಾರತದಲ್ಲಿ ಕಂಪೆನಿಗಳು ಮತ್ತು ಕೈಗಾರಿಕೆಗಳು ಹೆಚ್ಚಲು ಕಾರಣವಾಗಿ ಉದ್ಯೋಗ ಸೃಷ್ಟಿಯಾಗುತ್ತದೆ. ರಫೆಲ್ ಯುದ್ಧ ವಿಮಾನಕ್ಕೆ ಉಪಕರಣಗಳನ್ನು ಒದಗಿಸಲು ಈಗಾಗಲೇ 72 ಕಂಪೆನಿಗಳನ್ನು ಗುರುತಿಸಲಾಗಿದೆ ಎಂದರು.

ಒಪ್ಪಂದದಲ್ಲಿ ಎನ್ ಡಿಎ ಸರ್ಕಾರ ಮಾಡಿರುವ ತಪ್ಪುಗಳನ್ನು ಹೇಳಿದ ಅವರು, ಕೆಲವು ವೈಪರೀತ್ಯಗಳು ನಡೆದಿವೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT