ಚಿಕ್ಕಮಗಳೂರು: ಅರಣ್ಯ ಇಲಾಖೆ ಚೆಕ್ ಪೋಸ್ಟ್ ಮೇಲೆ ಪೆಟ್ರೋಲ್ ಬಾಂಬ್ ದಾಳಿ 
ರಾಜ್ಯ

ಚಿಕ್ಕಮಗಳೂರು: ಅರಣ್ಯ ಇಲಾಖೆ ಚೆಕ್ ಪೋಸ್ಟ್ ಮೇಲೆ ಪೆಟ್ರೋಲ್ ಬಾಂಬ್ ದಾಳಿ, ನಕ್ಸಲ್ ಕೃತ್ಯ ಶಂಕೆ

ಅರಣ್ಯ ಇಲಾಖೆ ಚೆಕ್ ಪೋಸ್ಟ್ ಮೇಲೆ ಕೆಲ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಬಸರೀಕಲ್‍ನಲ್ಲಿ ನಡೆದಿದೆ.

ಚಿಕ್ಕಮಗಳೂರು: ಅರಣ್ಯ ಇಲಾಖೆ ಚೆಕ್ ಪೋಸ್ಟ್ ಮೇಲೆ ಕೆಲ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ  ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಬಸರೀಕಲ್‍ನಲ್ಲಿ ನಡೆದಿದೆ.
ನಕ್ಸಲ್ ಪೀಡಿತ ಪ್ರದೇಶವಾಗಿರುವ ಮೂಡಿಗೆರೆ ತಾಲೂಕಿನ ಬಸರೀಕಲ್ ಚೆಕ್‍ಪೋಸ್ಟ್ ನಲ್ಲಿ ಈ ಘಟನೆ ವರದಿಯಾಗಿದ್ದು ಇದು ನಕ್ಸಲ್ ಕೃತ್ಯವಿರಬಹುದು ಎಂದು ಶಂಕಿಸಲಾಗಿದೆ.
ಭಾನುವಾರ ಬೆಳಗಿನ ಜಾವ 3.30ರ ಸುಮಾರಿಗೆ ಪೆಟ್ರೋಲ್ ಬಾಂಬೆಸೆದ ದುಷ್ಕರ್ಮಿಗಳು ಕತ್ತಲಲ್ಲಿ ಪರಾರಿಯಾಗಿದ್ದಾರೆ.ಆರು ಪೆಟ್ರೋಲ್ ಬಾಂಬ್ ಎಸೆಯಲಾಗಿದ್ದು  ಅದರಲ್ಲೊಂದು ಬೆಂಕಿ ಹತ್ತಿಕೊಂಡಿದ್ದು ರಟ್ಟಿನ ಪೆಟ್ಟಿಗೆಯಲ್ಲಿದ್ದ ಕಾಗದ ಪತ್ರಗಳು ಸುಟ್ಟು ಹೋಗಿದೆ.
ಬಾಟಲಿ ಶಬ್ದ ಕೇಳಿದ ಸಿಬ್ಬಂದಿಗಳು ಠಾಣೆಯಿಂದ ಹೊರಕ್ಕೆ ಓಡಿ ಬಂದಿದ್ದರೂ ಕೃತ್ಯ ಎಸಗಿದವರ ಪತ್ತೆಹಚ್ಚಲಾಗಿಲ್ಲ. 
ಘಟನೆ ಕುರಿತು ಮಾಹಿತಿ ಪಡೆದ ಹಿರಿಯ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT