ಕುಂಭ ಮೇಳದಲ್ಲಿ ಭಾಗವಹಿಸಿದ್ದ ಭಕ್ತರು 
ರಾಜ್ಯ

ಟಿ ನರಸೀಪುರ: ತ್ರಿವೇಣಿ ಸಂಗಮದ ಕುಂಭಮೇಳ; ಮೊದಲ ದಿನವೇ ಸಾವಿರಾರು ಭಕ್ತರ ಆಗಮನ

ಟಿ ನರಸೀಪುರದಲ್ಲಿ ನಡೆಯುತ್ತಿರುವ ಮೂರು ದಿನಗಳ ಕುಂಭ ಮೇಳಕ್ಕೆ ಭಾನುವಾರ ಚಾಲನೆ ನೀಡಲಾಗಿದ್ದು, ಮೊದಲ ದಿನವೇ ತ್ರಿವೇಣಿ ಸಂಗಮಕ್ಕೆ ಸಾವಿರಾರು ...

ಮೈಸೂರು: ಟಿ ನರಸೀಪುರದಲ್ಲಿ ನಡೆಯುತ್ತಿರುವ ಮೂರು ದಿನಗಳ ಕುಂಭ ಮೇಳಕ್ಕೆ ಭಾನುವಾರ ಚಾಲನೆ ನೀಡಲಾಗಿದ್ದು, ಮೊದಲ ದಿನವೇ ತ್ರಿವೇಣಿ ಸಂಗಮಕ್ಕೆ ಸಾವಿರಾರು ಮಂದಿ ಆಗಮಿಸಿದ್ದರು.
ಮೊದಲ ದಿನ ಪ್ರಾತಃಕಾಲ ಸೂರ್ಯೋದಯಕ್ಕೂ  ಮುನ್ನ  ಬೆಳಗ್ಗೆ  4 ಗಂಟೆಯಿಂದಲೇ ದೂರದ ಊರುಗಳಿಂದ ಆಗಮಿಸಿದ್ದ ಭಕ್ತರು ಗುಂಪು ಗುಂಪಾಗಿ ಮಾಘಮಾಸದ ಮಹೋದಯ ಪುಣ್ಯಸ್ನಾನ ಮಾಡಿ, ಪೂಜೆ ಸಲ್ಲಿಸಿ, ಪುನೀತರಾದರು. 
ಕಾವೇರಿ, ಕಪಿಲಾ ಮತ್ತು ಸಪ್ತಿಕಾ ನದಿಗಳು ಸೇರುವ ಸ್ಥಳವೇ ತ್ರಿವೇಣಿ ಸಂಗಮ, ಇಲ್ಲಿಗೆ ಮೈಸೂರು, ಮಂಡ್ಯ, ಬೆಂಗಳೂರು ಸೇರಿದಂತೆ ತಮಿಳುನಾಡು ಮತ್ತು ಆಂಧ್ರ ಪ್ರದೇಶದಿಂದ ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆಯಿದೆ.
ಆದಿ ಚುಂಚನಗಿರಿ ಮಠದ ಬಾಲಗಂಗಾಧರನಾಥ ಸ್ವಾಮೀಜಿ ಹಾಗೂ ಜೆಎಸ್ ಎಸ್ ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮಿಗಣಪತಿ ಸಚ್ಚಿದಾನಂದ ಸ್ವಾಮೀಜಿ ಹಾಗೂ ರಂಭಾಪುರಿ ಸ್ವಾಮೀಜಿ 1989 ರಲ್ಲಿ ಈ ಪುಣ್ಯ ಸ್ನಾನ ಪದ್ಧತಿ ಆರಂಭಿಸಿದ್ದರು.
ಭಾನುವಾರ ಅಗಸ್ತ್ಯೇಶ್ವರ ಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸುವ ಮೂಲಕ ಕುಂಭ ಮೇಳಕ್ಕೆ ಚಾಲನೆ ನೀಡಲಾಯಿತು, ತ್ರಿವೇಣಿ ಸಂಗಮದಲ್ಲಿ (ನಡುಹೊಳೆ ಬಸಪ್ಪ) ನಿರ್ಮಿಸಿರುವ ಯಾಗ ಮಂಟಪದಲ್ಲಿ ಬೆಳಗ್ಗೆ 9 ಗಂಟೆ ಅಂಕುರಾರ್ಪಣೆ, ಪುಣ್ಯಾಹ, ಗಣಪತಿ ಹೋಮ, ಪೂರ್ಣಾಹುತಿ, ಅಭಿಷೇಕ, ದೇವತಾರಾಧನೆ, ರಾಷ್ಟ್ರಾಶೀರ್ವಾದ, ಮಹಾ ಮಂಗಳಾರತಿ ನೆರವೇರಿಸುವುದರೊಂದಿಗೆ 11ನೇ ಕುಂಭಮೇಳಕ್ಕೆ ವಿದ್ಯುಕ್ತ ಚಾಲನೆ ದೊರೆಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

SCROLL FOR NEXT