ರಾಜ್ಯ

ಪುಲ್ವಾಮಾ ನರಮೇಧಕ್ಕೆ ಪ್ರತೀಕಾರವೇ ಪರಿಹಾರವಲ್ಲ- ಕುಮಾರಸ್ವಾಮಿ

Nagaraja AB

ಮೈಸೂರು: ಪುಲ್ವಾಮಾ ನರಮೇಧಕ್ಕೆ  ಶೀಘ್ರದಲ್ಲಿಯೇ ತಕ್ಕ ಪ್ರತ್ಯುತ್ತರ ನೀಡುವುದಾಗಿ  ಕೇಂದ್ರ ಸರ್ಕಾರ ಹೇಳುತ್ತಿದ್ದರೆ, ಪ್ರತಿಕಾರವೇ ಪರಿಹಾರವಲ್ಲ ಎಂದು ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ,  ಹೇಯದಾಳಿ ನಡೆಸಿದ ಉಗ್ರರಿಗೆ ಸೂಕ್ತ ಉತ್ತರ ನೀಡುವುದರಿಂದ ಹುತಾತ್ಮ ಯೋಧರ ಜೀವವನ್ನು ಮತ್ತೆ ತರಲು ಸಾಧ್ಯವಿಲ್ಲ. ಕಾಶ್ಮೀರದಲ್ಲಿ  ಅನುಕೂಲಕರ ವಾತವಾರಣ ನಿರ್ಮಾಣ ಮಾಡಬೇಕಿದೆ ಎಂದು ಅಭಿಪ್ರಾಯಪಟ್ಟರು.

ಇದು ದಾಳಿ, ಪ್ರತಿದಾಳಿಯ ವಿಚಾರವಲ್ಲ, ಜಮ್ಮು ಕಾಶ್ಮೀರದಲ್ಲಿ ಉಗ್ರ ಚಟುವಟಿಕೆಗಳಿಂದ ಅಮಾಯಕ ಜನರು ಬಲಿಯಾಗುತ್ತಿದ್ದಾರೆ.ಪ್ರತಿಕಾರದಿಂದ ಹುತಾತ್ಮ ಯೋಧರ ಜೀವನ್ನು ಮತ್ತೆ ತರಲು ಸಾಧ್ಯವಿಲ್ಲ, ಕಣಿವೆ ರಾಜ್ಯದಲ್ಲಿ ಅನುಕೂಲಕರ ಪರಿಸ್ಥಿತಿ ನಿರ್ಮಾಣವಾಗಬೇಕಿದೆ. ಇದು ಕೇಂದ್ರ ಸರ್ಕಾರದಿಂದ ಆಗಬೇಕಿದೆ ಎಂಬುದು ನನ್ನ ಅಭಿಪ್ರಾಯವಾಗಿದೆ ಎಂದರು.

ಮುಂದೆ ಇಂತಹ ಘಟನೆ ಮರುಕಳಿಸದಂತೆ  ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ . ದೇಶದಲ್ಲಿ ಭಯೋತ್ಪಾದನೆ ನಿರ್ಮೂಲನೆ ನಿಟ್ಟಿನಲ್ಲಿ ನಾವು ಮೊದಲ ಆದ್ಯತೆ ನೀಡಬೇಕಿದೆ ಎಂದು ಎಚ್. ಡಿ. ಕುಮಾರಸ್ವಾಮಿ ಹೇಳಿದರು.

SCROLL FOR NEXT