ಎಚ್. ಡಿ. ಕುಮಾರಸ್ವಾಮಿ 
ರಾಜ್ಯ

ಪುಲ್ವಾಮಾ ನರಮೇಧಕ್ಕೆ ಪ್ರತೀಕಾರವೇ ಪರಿಹಾರವಲ್ಲ- ಕುಮಾರಸ್ವಾಮಿ

ಪುಲ್ವಾಮಾ ನರಮೇಧಕ್ಕೆ ಶೀಘ್ರದಲ್ಲಿಯೇ ತಕ್ಕ ಪ್ರತ್ಯುತ್ತರ ನೀಡುವುದಾಗಿ ಕೇಂದ್ರ ಸರ್ಕಾರ ಹೇಳುತ್ತಿದ್ದರೆ, ಪ್ರತಿಕಾರವೇ ಪರಿಹಾರವಲ್ಲ ಎಂದು ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಮೈಸೂರು: ಪುಲ್ವಾಮಾ ನರಮೇಧಕ್ಕೆ  ಶೀಘ್ರದಲ್ಲಿಯೇ ತಕ್ಕ ಪ್ರತ್ಯುತ್ತರ ನೀಡುವುದಾಗಿ  ಕೇಂದ್ರ ಸರ್ಕಾರ ಹೇಳುತ್ತಿದ್ದರೆ, ಪ್ರತಿಕಾರವೇ ಪರಿಹಾರವಲ್ಲ ಎಂದು ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ,  ಹೇಯದಾಳಿ ನಡೆಸಿದ ಉಗ್ರರಿಗೆ ಸೂಕ್ತ ಉತ್ತರ ನೀಡುವುದರಿಂದ ಹುತಾತ್ಮ ಯೋಧರ ಜೀವವನ್ನು ಮತ್ತೆ ತರಲು ಸಾಧ್ಯವಿಲ್ಲ. ಕಾಶ್ಮೀರದಲ್ಲಿ  ಅನುಕೂಲಕರ ವಾತವಾರಣ ನಿರ್ಮಾಣ ಮಾಡಬೇಕಿದೆ ಎಂದು ಅಭಿಪ್ರಾಯಪಟ್ಟರು.

ಇದು ದಾಳಿ, ಪ್ರತಿದಾಳಿಯ ವಿಚಾರವಲ್ಲ, ಜಮ್ಮು ಕಾಶ್ಮೀರದಲ್ಲಿ ಉಗ್ರ ಚಟುವಟಿಕೆಗಳಿಂದ ಅಮಾಯಕ ಜನರು ಬಲಿಯಾಗುತ್ತಿದ್ದಾರೆ.ಪ್ರತಿಕಾರದಿಂದ ಹುತಾತ್ಮ ಯೋಧರ ಜೀವನ್ನು ಮತ್ತೆ ತರಲು ಸಾಧ್ಯವಿಲ್ಲ, ಕಣಿವೆ ರಾಜ್ಯದಲ್ಲಿ ಅನುಕೂಲಕರ ಪರಿಸ್ಥಿತಿ ನಿರ್ಮಾಣವಾಗಬೇಕಿದೆ. ಇದು ಕೇಂದ್ರ ಸರ್ಕಾರದಿಂದ ಆಗಬೇಕಿದೆ ಎಂಬುದು ನನ್ನ ಅಭಿಪ್ರಾಯವಾಗಿದೆ ಎಂದರು.

ಮುಂದೆ ಇಂತಹ ಘಟನೆ ಮರುಕಳಿಸದಂತೆ  ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ . ದೇಶದಲ್ಲಿ ಭಯೋತ್ಪಾದನೆ ನಿರ್ಮೂಲನೆ ನಿಟ್ಟಿನಲ್ಲಿ ನಾವು ಮೊದಲ ಆದ್ಯತೆ ನೀಡಬೇಕಿದೆ ಎಂದು ಎಚ್. ಡಿ. ಕುಮಾರಸ್ವಾಮಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT