ಸಂಗ್ರಹ ಚಿತ್ರ 
ರಾಜ್ಯ

ಕಲಬುರಗಿ: ಪಾಕ್ ಧರ್ಮ ಪ್ರಚಾರಕನ ಕತ್ತು ಸೀಳಿ ಭೀಕರ ಕೊಲೆ!

ಪ್ರವಾದಿ ಮೊಹಮ್ಮದ್ ಪೈಗಂಬರ್ ಹಾಗೂ ಕುರಾನ್ ಗ್ರಂಥ ಕುರಿತು ಅವಹೇಳನಕಾರಿ ಪ್ರಚಾರ ಮಾಡುತ್ತಿದ್ದಾನೆ ಎಂದು ಆರೋಪಿಸಿ ಪಾಕ್ ಧರ್ಮ ಪ್ರಚಾರಕನ ಕತ್ತು ಸೀಳಿ ಬರ್ಬರವಾಗಿ ಹತ್ಯೆ...

ಕಲಬುರಗಿ: ಪ್ರವಾದಿ ಮೊಹಮ್ಮದ್ ಪೈಗಂಬರ್ ಹಾಗೂ ಕುರಾನ್ ಗ್ರಂಥ ಕುರಿತು ಅವಹೇಳನಕಾರಿ ಪ್ರಚಾರ ಮಾಡುತ್ತಿದ್ದಾನೆ ಎಂದು ಆರೋಪಿಸಿ ಪಾಕ್ ಧರ್ಮ ಪ್ರಚಾರಕನ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಾವರಗೇರಾ ಕ್ರಾಸ್ ನಲ್ಲಿ ನಡೆದಿದೆ. 
ಉತ್ತರ ಪ್ರದೇಶದ ಗಾಜಿಯಾಬಾದ್ ನ 30 ವರ್ಷದ ಜಲಾಲ್ ಕೊಲೆಯಾದ ಧರ್ಮ ಪ್ರಚಾರಕ. ಇತ ಕಳೆದ ಐದಾರು ತಿಂಗಳಿನಿಂದ ಕಲಬುರಗಿಯಲ್ಲಿ ಪಾಕಿಸ್ತಾನದ ಅಹ್ಮದ್ ಇಸಾ ಪಂಥದ ಪ್ರಚಾರ ಮಾಡುತ್ತಿದ್ದ. ಇದರಿಂದ ಕೋಪಗೊಂಡ 20ಕ್ಕೂ ಹೆಚ್ಚು ಯುವಕರ ತಂಡ ಆತನ ಕತ್ತು ಸೀಳಿ ಕೊಲೆ ಮಾಡಿದ್ದಾರೆ. 
ಈ ಸಂಬಂಧ ಪೊಲೀಸರು 14 ಜನರನ್ನು ಬಂಧಿಸಿದ್ದಾರೆ. ಜಲಾಲ್ ನನ್ನು ತಾಜಸುಲ್ತಾನಪುರ ಬಳಿ ಕರೆದೊಯ್ದು ನಂತರ ತಾವರಗೇರಾ ಕ್ರಾಸ್ ಬಳಿ ಕುತ್ತಿಗೆ, ಹೊಟ್ಟೆಗೆ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದರು. ಕೊಲೆ ಮಾಡಿದ ಯುವಕರು ಸುನ್ನಿ ಮತ್ತು ಶಿಯಾ ಪಂಗಡಕ್ಕೆ ಸೇರಿದವರಾಗಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT