ರಾಜ್ಯಪಾಲ ವಜೂಭಾಯಿ ವಾಲಾ 
ರಾಜ್ಯ

ಮಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ ವಿಸ್ತರಣೆಗೆ ರಾಜ್ಯಪಾಲರಿಂದ ಚಾಲನೆ

ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ವಿಸ್ತರಣೆಗೆ ರಾಜ್ಯಪಾಲ ವಜೂಭಾಯಿ ವಾಲಾ ಇಂದು ಶಂಕುಸ್ಥಾಪನೆ ನೆರವೇರಿಸಿದರು.

ಮಂಗಳೂರು: ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್  ವಿಸ್ತರಣೆಗೆ ರಾಜ್ಯಪಾಲ ವಜೂಭಾಯಿ ವಾಲಾ ಇಂದು ಶಂಕುಸ್ಥಾಪನೆ ನೆರವೇರಿಸಿದರು.

 ಪ್ರಸ್ತುತ ಟರ್ಮಿನಲ್  ವಿಸ್ತಾರ 19, 509 ಚದರ ಮೀಟರ್ ಇದೆ. ಹೊಸದಾಗಿ 11, 343 ಚದರ ಮೀಟರ್ ವಿಸ್ತೀರ್ಣದ ಟರ್ಮಿನಲ್  ನಿರ್ಮಿಸಲಾಗುತ್ತಿದೆ.

ಈಗ ದಟ್ಟಣೆಯ ಅವಧಿಯಲ್ಲಿ ಪ್ರತಿ ಗಂಟೆಗೆ 730 ಪ್ರಯಾಣಿಕರಿಗೆ ಬೋರ್ಡಿಂಗ್ ಅವಕಾಶ ಕಲ್ಪಿಸುವ ಸಾಮರ್ಥ್ಯ ಇದೆ. ಹೊಸ ಟರ್ಮಿನಲ್ ನಿರ್ಮಾಣದ ಬಳಿಕ ಪ್ರತಿ ಗಂಟೆಗೆ 1 ಸಾವಿರ ಪ್ರಯಾಣಿಕರಿಗೆ ಬೋರ್ಡಿಂಗ್ ಗೆ ಅವಕಾಶ ಕಲ್ಪಿಸುವ ಸಾಮರ್ಥ್ಯ ದೊರಕಲಿದೆ.  ವಾರ್ಷಿಕ ಪ್ರಯಾಣಿಕರ ಸಂಖ್ಯೆ 20 ಲಕ್ಷದಿಂದ 30 ಲಕ್ಷಕ್ಕೆ ಹೆಚ್ಚಲಿದೆ ಎನ್ನಲಾಗಿದೆ.

ಅಂತಾರಾಷ್ಟ್ರೀಯ ಪ್ರಯಾಣಿಕರ ವಿಭಾಗದಲ್ಲಿ ಎರಡು ಹೊಸ ಬ್ಯಾಗೇಜ್ ಕನ್ವೆಯರ್ ಮತ್ತು ದೇಶಿಯ ಪ್ರಯಾಣಿಕರ ವಿಭಾಗದಲ್ಲಿ ಒಂದು ಹೊಸ ಕನ್ವೆಯರ್ ಅಳವಡಿಸಲಾಗುತ್ತದೆ. ಎರಡು ಹೊಸ ಪ್ರಯಾಣಿಕರ ಬೋರ್ಡಿಂಗ್ ಸೇತುವೆಗಳನ್ನು ನಿರ್ಮಿಸಲಾಗುತ್ತದೆ.
ಪ್ರಯಾಣಿಕರ ವಿಶ್ರಾಂತಿಗೆ ಬೃಹತ್ ಕೊಠಡಿ, ಉಪಹಾರ ಗೃಹ, ಪ್ರಯಾಣಿಕರ ಭೇಟಿಗೆ ಸ್ಥಳಾವಕಾಶ, ಪ್ರಥಮ  ಚಿಕಿತ್ಸಾ ಕೊಠಡಿಗಳನ್ನು ಈ ಯೋಜನೆಯಲ್ಲಿ ನಿರ್ಮಿಸಲಾಗುತ್ತದೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

SCROLL FOR NEXT